ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ –
ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ
ರಿಪ್ಪನ್ ಪೇಟೆ : ಪ್ರಕೃತಿಯೊಡನೆ ಮಾನವನ ನಂಟನ್ನು ಪ್ರತಿಬಿಂಬಿಸುವ, ಕೃಷಿಕ ಜೀವನಶೈಲಿಯ ಹೃದಯಸ್ಪರ್ಶಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಭೂಮಿ ಹುಣ್ಣಿಮೆ ರಿಪ್ಪನ್ ಪೇಟೆ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಕ್ತಿಭಾವ– ಸಂಭ್ರಮ – ಸಡಗರಗಳಿಂದ ಆಚರಿಸಲಾಯಿತು.
ಬೆಳಗಿನ ಜಾವ ಗ್ರಾಮೀಣರು ಹೊಲ–ಗದ್ದೆ, ತೋಟಗಳಲ್ಲಿ ಹೊಸ ತಳಿರು ತೋರಣಗಳಿಂದ ಅಲಂಕರಿಸಿ ಭೂಮಿತಾಯಿಗೆ ಪೂಜೆ ಸಲ್ಲಿಸಿದರು. ಮಣ್ಣಿನ ಪರಿಮಳ, ತೆನೆಗಳ ಹೊಳಪು, ಮಳೆಯ ಹನಿಗಳ ಸಮಾಗಮ – ಇವೆಲ್ಲವು ಹಬ್ಬದ ಸೊಬಗನ್ನು ಮೆರಗುಗೊಳಿಸಿದವು.
ಹರತಾಳು ಗ್ರಾಮದಲ್ಲಿ ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ಕುಟುಂಬಸ್ಥರು, ಬಂಧು–ಬಳಗ ಹಾಗೂ ಹಿತೈಷಿಗಳೊಂದಿಗೆ ಭೂಮಿ ಪೂಜೆಯಲ್ಲಿ ಪಾಲ್ಗೊಂಡರು. ಭಕ್ತಿಯಿಂದ ನಡೆದ ಈ ಪೂಜೆಯ ವೇಳೆ ಹಾಲಪ್ಪ ಅವರು ಮಾತನಾಡಿ “ಮಲೆನಾಡಿನ ಸಾಂಪ್ರದಾಯಿಕ ಜೀವನಶೈಲಿಯಲ್ಲಿ ಭೂಮಿ ಹುಣ್ಣಿಮೆ ವಿಶಿಷ್ಟ ಸ್ಥಾನ ಹೊಂದಿದೆ. ವಿಶೇಷವಾಗಿ ದೀವರ ಜನಾಂಗದಲ್ಲಿ ಭೂಮಿಯನ್ನು ತಾಯಿಯಂತೆ ಆರಾಧಿಸುವ ಸಂಸ್ಕೃತಿ ಪೀಳಿಗೆಯಿಂದ ಪೀಳಿಗೆ ಸಾಗುತ್ತಿದೆ. ಬತ್ತದ ತೆನೆ ಬರುವ ಈ ಸಮಯದಲ್ಲಿ ಭೂಮಿತಾಯಿಗೆ ಕೃತಜ್ಞತೆ ಸಲ್ಲಿಸುವುದೇ ಹಬ್ಬದ ನಿಜವಾದ ಅರ್ಥ. ಮನೆಮಾತುಗಳೊಂದಿಗೆ ಸಾಂಪ್ರದಾಯಿಕ ಖಾದ್ಯಗಳನ್ನು ಹಂಚಿಕೊಳ್ಳುವುದರಿಂದ ಕುಟುಂಬಸೌಹಾರ್ದ ಹಾಗೂ ಸಮುದಾಯದ ಏಕತೆ ಮತ್ತಷ್ಟು ಬಲವಾಗುತ್ತದೆ. ಪ್ರಕೃತಿಯೊಡನೆ ಹೊಂದಾಣಿಕೆಯಿಂದ ಬದುಕುವುದು ನಮ್ಮ ಜೀವನದ ಮೂಲ ಮೌಲ್ಯ” ಎಂದು ಹೇಳಿದರು.
ಹಬ್ಬದ ಸಂದರ್ಭದಲ್ಲಿ ಹಿರಿಯರಿಂದ ಹಿಡಿದು ಮಕ್ಕಳವರೆಗೆ ಎಲ್ಲರೂ ಉತ್ಸಾಹ–ಹುಮ್ಮಸ್ಸಿನೊಂದಿಗೆ ಪಾಲ್ಗೊಂಡಿದ್ದು, ಹಳ್ಳಿಗಳಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿತು.
ರಿಪ್ಪನ್ ಪೇಟೆ ಪಟ್ಟಣದ ಜೊತೆಗೆ ಮೂಗುಡ್ತಿ, ಹೆದ್ದಾರಿಪುರ, ಕೆಂಚನಾಳ, ಕೂಡೂರು, ಕಣಬಂದೂರು, ಬೆಳ್ಳೂರು, ಹಾರೋಹಿತ್ತಲು, ತಳಲೆ, ಕೋಟೆ ತಾರಿಗಜಿನಿ, ಕೋಡೂರು, ಗವಟೂರು, ಬರುವೆ, ಬೆಳಕೊಡು, ಕಾರಗೋಡು, ಕರಡಿಗ ಮುಂತಾದ ಗ್ರಾಮಗಳಲ್ಲೂ ಭೂಮಿ ಹುಣ್ಣಿಮೆ ಹಬ್ಬವು ಗ್ರಾಮೀಣರ ಭಕ್ತಿ, ಸಂಸ್ಕೃತಿ ಮತ್ತು ಏಕತೆಯ ಪ್ರತಿಬಿಂಬವಾಗಿ ಜರಗಿತು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…