ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ
Car falls into ravine after hitting bus – one dead, three injured
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ.
ಕಾರು ಚಲಾಯಿಸುತ್ತಿದ್ದ ಮಂಡೋಡಿ ಗ್ರಾಮದ ಹರಿ ಭಟ್ ( 76) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ.
ಮೃತರ ಪತ್ನಿ ಕಮಲಾಕ್ಷಿ, ಸುಜಾತಾ ಮತ್ತು ಲೀಲಾವತಿ ಎಂಬುವವರ ಜೊತೆಗೆ ಕಾರಿನಲ್ಲಿ ಹೊಸನಗರ ತಾಲೂಕಿನ ನಿಟ್ಟೂರಿನಿಂದ ಮತ್ತಿಕೈ ಗ್ರಾಮಕ್ಕೆ ತೆರಳುತ್ತಿದ್ದಾಗ ಶಿವಮೊಗ್ಗದಿಂದ ಸಿಗಂದೂರಿಗೆ ತೆರಳುತಿದ್ದ ಭಾಗ್ಯಲಕ್ಷ್ಮಿ ಬಸ್ ಗೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ನಡೆದಿದೆ.
ನಿಟ್ಟೂರು – ನಾಗೋಡಿ ಸಮೀಪದ ಮಡೋಡಿ ಗ್ರಾಮದ ಬಳಿ ಹರಿ ಭಟ್ ಅವರು ಚಲಾಯಿಸುತ್ತಿದ್ದ ಕಾರು ಭಾಗ್ಯಲಕ್ಷ್ಮಿ ಬಸ್ಸಿನ ಮಧ್ಯ ಭಾಗಕ್ಕೆ ಡಿಕ್ಕಿಯಾಗಿದೆ. ಈ ವೇಳೆ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿನತ್ತ ಸಾಗಿ ಹಲವು ಬಾರಿ ಪಲ್ಟಿಯಾಗಿದೆ. ಈ ಸಂದರ್ಭ ಹರಿ ಭಟ್ ಅವರಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.
ಪತ್ನಿ ಕಮಲಾಕ್ಷಿ, ಸುಜಾತಾ ಮತ್ತು ಲೀಲಾವತಿ ಅವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…