ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು
ಆಟೋ ಡ್ರೈವರನ್ನು ನಂಬಿ ಹೋದ ಇಬ್ಬರು ಅಪ್ರಾಪ್ತ ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ (ಗ್ಯಾಂಗ್ ರೇಪ್) ನಡೆಯುವುದನ್ನು ತಪ್ಪಿಸಿ, ಇಬ್ಬರು ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಯುವಕರ ದುಷ್ಕೃತ್ಯದಿಂದ ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ.
ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು.ಖಾಕಿ ಪಡೆ ಇಬ್ಬರು ಅಪ್ರಾಪ್ತೆಯರ ರಕ್ಷಣೆ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಮೂಡಬಿದಿರೆ ಪೊಲೀಸರು ಇಬ್ಬರು ಅಪ್ರಾಪ್ತೆಯರ ರಕ್ಷಣೆ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.
ಏನಿದು ಘಟನೆ?
ನಿನ್ನೆ (ಅ.13) ಸಂಜೆ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಈ ಘಟನೆ ನಡೆದಿದೆ. ನಿಡ್ಡೋಡಿ ನಿವಾಸಿ ಮತ್ತು ಆಟೋ ಚಾಲಕನಾದ ಮಹೇಶ್ (30) ಎಂಬಾತ ಈ ದುಷ್ಕೃತ್ಯದ ಪ್ರಮುಖ ಆರೋಪಿಯಾಗಿದ್ದಾನೆ. ಮಹೇಶ್ ಇಬ್ಬರು ಅಪ್ರಾಪ್ತ ಕಾಲೇಜು ಬಾಲಕಿಯರನ್ನು ಮಾತುಕತೆಯ ಮೂಲಕ ಪುಸಲಾಯಿಸಿ, ತನ್ನ ಮನೆಗೆ ಕರೆತಂದಿದ್ದ. ಬಾಲಕಿಯರು ಅಪ್ರಾಪ್ತರೆಂದು ತಿಳಿದಿದ್ದರೂ ಆತ ಅವರನ್ನು ಮೋಸದಿಂದ ಮನೆಗೆ ಕರೆತಂದಿದ್ದನು.
ಮಹೇಶ್, ಆ ಬಾಲಕಿಯರ ಮೇಲೆ ಅತ್ಯಾಚಾ*ರ ಎಸಗುವ ಉದ್ದೇಶದಿಂದ ಕಟೀಲು ನಿವಾಸಿಗಳಾದ ತನ್ನ ಸ್ನೇಹಿತರಾದ ಶ್ರೀಕಾಂತ್ (25), ಯಜ್ಞೇಶ್ (25), ಮತ್ತು ದಿಲೀಪ್ (25) ಅವರನ್ನು ಸಹ ತನ್ನ ಮನೆಗೆ ಕರೆಸಿಕೊಂಡಿದ್ದ. ಸಾಮೂಹಿಕ ಅತ್ಯಾಚಾ*ರಕ್ಕೆ ಸಂಚು ರೂಪಿಸಲಾಗಿತ್ತು ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ:
ಆರೋಪಿ ಮಹೇಶ್ನ ದುಷ್ಕೃತ್ಯದ ಬಗ್ಗೆ ಮೂಡಬಿದಿರೆ ಠಾಣೆಯ ಪೊಲೀಸರಿಗೆ ಖಚಿತ ಮಾಹಿತಿ ದೊರಕಿದೆ. ಮಾಹಿತಿಯ ಗಂಭೀರತೆಯನ್ನು ಅರಿತ ಪೊಲೀಸರು ತಕ್ಷಣವೇ ಯಾವುದೇ ವಿಳಂಬ ಮಾಡದೆ, ಮಹೇಶ್ನ ನಿಡ್ಡೋಡಿಯ ಮನೆ ಮೇಲೆ ದಾಳಿ ನಡೆಸಿದರು. ಪೊಲೀಸರು ಸಮಯಕ್ಕೆ ಸರಿಯಾಗಿ ದಾಳಿ ನಡೆಸಿದ ಪರಿಣಾಮ, ಮಹೇಶ್ ಮತ್ತು ಆತನ ಸ್ನೇಹಿತರು ತಮ್ಮ ದುಷ್ಕೃತ್ಯವನ್ನು ನಡೆಸುವುದಕ್ಕೂ ಮುನ್ನವೇ ಸಿಕ್ಕಿಬಿದ್ದರು. ಪೊಲೀಸರ ಈ ಸಮಯಪ್ರಜ್ಞೆ ಮತ್ತು ತ್ವರಿತ ಕಾರ್ಯಾಚರಣೆಯಿಂದ ಇಬ್ಬರು ಅಮಾಯಕ ಅಪ್ರಾಪ್ತ ಬಾಲಕಿಯರು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ತಕ್ಷಣವೇ ಆ ಇಬ್ಬರು ಬಾಲಕಿಯರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದ್ದಾರೆ.
ನಾಲ್ವರ ಬಂಧನ, ಪೋಕ್ಸೋ ಪ್ರಕರಣ ದಾಖಲು:
ದಾಳಿ ವೇಳೆ ಸ್ಥಳದಲ್ಲಿದ್ದ ಆಟೋ ಚಾಲಕ ಮಹೇಶ್ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳಾದ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಅವರನ್ನು ಮೂಡಬಿದಿರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾ*ರ ಯತ್ನ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಗಂಭೀರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಇತ್ತೀಚೆಗೆ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಮೂಡಬಿದಿರೆ ಪೊಲೀಸರ ಈ ತ್ವರಿತ ಕ್ರಮವು ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ. ಪೊಲೀಸರು ಈ ಗ್ಯಾಂಗ್ನ ಸಂಪೂರ್ಣ ಹಿನ್ನೆಲೆ ಹಾಗೂ ಇತರೆ ಯಾವುದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…