ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ
ರಿಪ್ಪನ್ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು.ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯಡಿ ಅವರು ಧರಿಸುತ್ತಿದ್ದ ಬಟ್ಟೆಯನ್ನು ಸಹ ತ್ಯಜಿಸಿ ಚರಕದಿಂದ ಉತ್ಪಾದಿಸಿದ ನೂಲಿನಿಂದ ತಯಾರಾದ ಖಾದಿ ಬಟ್ಟೆಗಳನ್ನು ಬಳಸುವುದರೊಂದಿಗೆ ದೇಶಿಯ ಸಂಸ್ಕೃತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು.
ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಹೆಗ್ಗೊಡು ವಸ್ತ್ರವಿನ್ಯಾಸದವರು ಆಯೋಜಿಸಲಾಗಿರುವ ಖಾದಿ ಬಟ್ಟೆಗಳ ಪ್ರದರ್ಶನ ಮಾರಾಟ ಮೇಳಕ್ಕೆ ಚಾಲನೆ ನೀಡಿ, ನಮ್ಮೂರಿನಲ್ಲಿ ಗ್ರಾಮೋದ್ಯೋಗ ಯೋಜನೆಯಿಂದ ಸ್ವಾವಲಂಬಿ ಜೀವನಕ್ಕೆ ಚರಕ ಸಹಕಾರಿಯಾಗಿದೆ ಇದರಿಂದ ತಯಾರಾಗುತ್ತಿರುವ ಖಾದಿ ಬಟ್ಟೆಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು. ಸರ್ಕಾರ ಸಹ ಅಂಗನವಾಡಿ ಕಾರ್ಯಕರ್ತೆಯರಿಗೆ ಸೀರೆ ನೀಡುವ ಬಗ್ಗೆ ಚಿಂತನೆ ನಡೆಸಿರುವುದರ ಬಗ್ಗೆ ಪ್ರಸ್ತಾಪಿಸಿದ ಅವರು, ಅಂಗನವಾಡಿ ಕಾರ್ಯಕತೆಯರಿಗೆ ಸೀರೆ ನೀಡುವ ಯೋಜನೆಯಲ್ಲಿ ಚರಕದಿಂದ ತಯಾರಾಗಿರುವ ಸ್ವದೇಶಿ ಸೀರೆಗಳನ್ನು ಖರೀದಿಸಿ ವಿತರಣೆ ಮಾಡಬೇಕು ಇಲ್ಲವೇ ಆವರಿಗೆ ಖಾದಿ ಗ್ರಾಮೋದ್ಯೋಗದಲ್ಲಿನ ಖಾದಿಯ ಸೀರೆಗಳನ್ನು ಖರೀದಿಸುವಂತೆ ಆದೇಶಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ ಅವರು ಸ್ವದೇಶಿ ಉತ್ಪನ್ನಗಳನ್ನು ಖರೀದಿಸುವಂದರೊಂದಿಗೆ ಸ್ವದೇಶಿ ಉತ್ಪನ್ನಗಳನ್ನು ಖರೀದಿಸಿ ದೇಶವನ್ನು ಉಳಿಸಿ ಎಂಬ ಜಯ ಘೋಷಣೆಯನ್ನು ಮೊಳಗಿಸಿದರು.
ತಾಲ್ಲೂಕು ಬಿಜೆಪಿ ಘಟಕದ ಆಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…