ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ
ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರ ಪ್ರದೇಶದಲ್ಲಿ ಕಳ್ಳರು ಬೀಗ ಒಡೆದು ಗೋದಾಮಿನಿಂದ ಅಡಿಕೆ ಕಳ್ಳತನ ಮಾಡಿದ ಘಟನೆ ನಡೆದಿದೆ. ಉದ್ಯಮಿಯೊಬ್ಬರಿಗೆ ಸೇರಿದ ಈ ಗೋದಾಮಿನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಿಕೆ ನಾಪತ್ತೆಯಾಗಿವೆ.
ದೂರುದಾರರು ತಮ್ಮ ಮಳಿಗೆಯಲ್ಲಿ ಇರಿಸಲು ಸ್ಥಳಾವಕಾಶವಿಲ್ಲದೆ, ಕಳೆದ ಸೆಪ್ಟೆಂಬರ್ 21ರಂದು ಅನುಪಿನಕಟ್ಟೆ ಸಮೀಪದ ಶೀಟಿನ ಗೋದಾಮಿನಲ್ಲಿ ಅಡಿಕೆಯನ್ನು ಇಟ್ಟಿದ್ದರು. ಮಾರಾಟಕ್ಕೆ ಸಿದ್ಧಪಡಿಸಿದ್ದ ಈ ಅಡಿಕೆಯನ್ನು ನೋಡಿಕೊಳ್ಳಲು ಪರಿಚಯಸ್ಥರೊಬ್ಬರಿಗೆ ಜವಾಬ್ದಾರಿ ನೀಡಲಾಗಿತ್ತು.
ಸೆಪ್ಟೆಂಬರ್ 22ರ ರಾತ್ರಿ ಸುಮಾರು 8 ಗಂಟೆಯವರೆಗೆ ಅವರು ಗೋದಾಮಿನಲ್ಲಿ ಇದ್ದು, ಬಳಿಕ ಬೀಗ ಹಾಕಿ ತೆರಳಿದ್ದರು. ಆದರೆ ಮರುದಿನ ಸೆಪ್ಟೆಂಬರ್ 23ರಂದು ಮಧ್ಯಾಹ್ನ 1 ಗಂಟೆಗೆ ಗೋದಾಮಿಗೆ ಬಂದಾಗ, ಬಾಗಿಲಿನ ಬೀಗ ಒಡೆದು ಕಳ್ಳರು ಒಳನುಗ್ಗಿರುವುದು ಮತ್ತು ಅಡಿಕೆ ತುಂಬಿದ್ದ 20 ಚೀಲಗಳು ನಾಪತ್ತೆಯಾಗಿರುವುದು ಪತ್ತೆಯಾಯಿತು.
ಈ ಘಟನೆ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಪ್ರಾರಂಭವಾಗಿದೆ.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…