ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ?

ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ?

Housewife mysteriously dies after just two years of love marriage

ಇಬ್ಬರು ಪರಸ್ಪರ ಪ್ರೀತಿಸಿ ಎರಡು ವರ್ಷ ಹಿಂದೆ ಅಷ್ಟೇ ಮದುವೆಯಾಗಿದ್ದರು. ಪ್ರೀತಿಯ ಮದುವೆಗೊಂದು ಒಂದೂವರೆ ವರ್ಷದ ಮಗು ಸಹ ಇದೆ. ಸ್ವರ್ಗಕ್ಕೆ ಕಿಚ್ಚು ಹಚ್ಚುವಂಥಾ ಸಂಸಾರ ಇದ್ದಾಗ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ.

ದಾವಣಗೆರೆ ಜಿಲ್ಲೆಯ ಚನ್ನಗರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜುನೇರಾ ಕೌಸರ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ.

ಜಿಶಾನ್ (23) ಮತ್ತು ಜುನೇರಾ ಕೌಸರ್ (19) ಇಬ್ಬರು ಪ್ರೀತಿಸಿ ಮದುವೆಯಾಗಿ ಎರಡು ವರ್ಷವಾಗಿತ್ತು. ದಂಪತಿಗೆ ಒಂದೂವರೆ ವರ್ಷದ ಮಗು ಸಹ ಇದೆ. ಪ್ರೀತಿ ಮದುವೆಯ ನಂತರ ಮೊದಲಿಗೆ ಸೌಹಾರ್ದ ಸಂಸಾರ ಮುಂದುವರಿದರೂ, ಕಳೆದ ಕೆಲ ತಿಂಗಳುಗಳಿಂದ ಪತಿ-ಪತ್ನಿ ನಡುವೆ ಮನಸ್ತಾಪ ಹೆಚ್ಚಾಗಿ ಪದೇ ಪದೇ ಜಗಳ ನಡೆಯುತ್ತಿದ್ದುದಾಗಿ ಮೂಲಗಳು ತಿಳಿಸಿವೆ.

ಪತಿಯ ಕಿರುಕುಳ ತಾಳಲಾರದೆ ಜುನೇರಾ ಕಳೆದ ವಾರ ತವರು ಮನೆ ಸೇರಿಕೊಂಡಿದ್ದಳು. ನಂತರ ಹೆತ್ತವರು ಮತ್ತು ಸಂಬಂಧಿಕರ ಮಧ್ಯಸ್ಥಿಕೆಯಿಂದ ರಾಜೀ ಪಂಚಾಯ್ತಿ ನಡೆದು ಮಗಳು ಗಂಡನ ಮನೆಗೆ ಮರಳಿದ್ದರು. ಆದರೆ ಕೇವಲ ಮೂರೇ ದಿನಗಳಲ್ಲೇ ಜುನೇರಾ ಅನುಮಾನಾಸ್ಪದ ಸಾವು ಕಂಡಿದ್ದಾಳೆ.

ಮನೆಯ ಬೆಡ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಜುನೇರಾಳನ್ನು ತುರ್ತಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅ.26ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಮೃತಳ ದೇಹದಲ್ಲಿ ಹಲ್ಲೆ ಗುರುತುಗಳು ಸ್ಪಷ್ಟವಾಗಿ ಕಂಡುಬಂದ ಹಿನ್ನೆಲೆಯಲ್ಲಿ, ಹೆತ್ತವರು ಪತಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದು “ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧ ಬೆಳೆಸಿ, ಮಗಳನ್ನು ಮಾನಸಿಕ-ದೈಹಿಕ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ” ಎಂದು ದೂರಿದ್ದಾರೆ. ಪತ್ನಿ ಮೃತಪಟ್ಟಿರುವುದು ಖಚಿತವಾದ ನಂತರ ಪತಿ ಜಿಶಾನ್ ಸ್ವಯಂ ಚನ್ನಗಿರಿ ಠಾಣೆಗೆ ಹಾಜರಾಗಿ ಶರಣಾಗತಿಯಾಗಿದ್ದಾನೆ.

ಚನ್ನಗಿರಿ ಪೊಲೀಸರು ಅನುಮಾನಾಸ್ಪದ ಸಾವು ಎಂಬ ಅಡಿಯಲ್ಲಿ ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

Housewife mysteriously dies after just two years of love marriage

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 hour ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

18 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

19 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

20 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago