ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು – ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ?
Housewife mysteriously dies after just two years of love marriage
ಇಬ್ಬರು ಪರಸ್ಪರ ಪ್ರೀತಿಸಿ ಎರಡು ವರ್ಷ ಹಿಂದೆ ಅಷ್ಟೇ ಮದುವೆಯಾಗಿದ್ದರು. ಪ್ರೀತಿಯ ಮದುವೆಗೊಂದು ಒಂದೂವರೆ ವರ್ಷದ ಮಗು ಸಹ ಇದೆ. ಸ್ವರ್ಗಕ್ಕೆ ಕಿಚ್ಚು ಹಚ್ಚುವಂಥಾ ಸಂಸಾರ ಇದ್ದಾಗ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ.
ದಾವಣಗೆರೆ ಜಿಲ್ಲೆಯ ಚನ್ನಗರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜುನೇರಾ ಕೌಸರ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಜಿಶಾನ್ (23) ಮತ್ತು ಜುನೇರಾ ಕೌಸರ್ (19) ಇಬ್ಬರು ಪ್ರೀತಿಸಿ ಮದುವೆಯಾಗಿ ಎರಡು ವರ್ಷವಾಗಿತ್ತು. ದಂಪತಿಗೆ ಒಂದೂವರೆ ವರ್ಷದ ಮಗು ಸಹ ಇದೆ. ಪ್ರೀತಿ ಮದುವೆಯ ನಂತರ ಮೊದಲಿಗೆ ಸೌಹಾರ್ದ ಸಂಸಾರ ಮುಂದುವರಿದರೂ, ಕಳೆದ ಕೆಲ ತಿಂಗಳುಗಳಿಂದ ಪತಿ-ಪತ್ನಿ ನಡುವೆ ಮನಸ್ತಾಪ ಹೆಚ್ಚಾಗಿ ಪದೇ ಪದೇ ಜಗಳ ನಡೆಯುತ್ತಿದ್ದುದಾಗಿ ಮೂಲಗಳು ತಿಳಿಸಿವೆ.
ಪತಿಯ ಕಿರುಕುಳ ತಾಳಲಾರದೆ ಜುನೇರಾ ಕಳೆದ ವಾರ ತವರು ಮನೆ ಸೇರಿಕೊಂಡಿದ್ದಳು. ನಂತರ ಹೆತ್ತವರು ಮತ್ತು ಸಂಬಂಧಿಕರ ಮಧ್ಯಸ್ಥಿಕೆಯಿಂದ ರಾಜೀ ಪಂಚಾಯ್ತಿ ನಡೆದು ಮಗಳು ಗಂಡನ ಮನೆಗೆ ಮರಳಿದ್ದರು. ಆದರೆ ಕೇವಲ ಮೂರೇ ದಿನಗಳಲ್ಲೇ ಜುನೇರಾ ಅನುಮಾನಾಸ್ಪದ ಸಾವು ಕಂಡಿದ್ದಾಳೆ.
ಮನೆಯ ಬೆಡ್ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಜುನೇರಾಳನ್ನು ತುರ್ತಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅ.26ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಮೃತಳ ದೇಹದಲ್ಲಿ ಹಲ್ಲೆ ಗುರುತುಗಳು ಸ್ಪಷ್ಟವಾಗಿ ಕಂಡುಬಂದ ಹಿನ್ನೆಲೆಯಲ್ಲಿ, ಹೆತ್ತವರು ಪತಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದು “ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧ ಬೆಳೆಸಿ, ಮಗಳನ್ನು ಮಾನಸಿಕ-ದೈಹಿಕ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ” ಎಂದು ದೂರಿದ್ದಾರೆ. ಪತ್ನಿ ಮೃತಪಟ್ಟಿರುವುದು ಖಚಿತವಾದ ನಂತರ ಪತಿ ಜಿಶಾನ್ ಸ್ವಯಂ ಚನ್ನಗಿರಿ ಠಾಣೆಗೆ ಹಾಜರಾಗಿ ಶರಣಾಗತಿಯಾಗಿದ್ದಾನೆ.
ಚನ್ನಗಿರಿ ಪೊಲೀಸರು ಅನುಮಾನಾಸ್ಪದ ಸಾವು ಎಂಬ ಅಡಿಯಲ್ಲಿ ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
Housewife mysteriously dies after just two years of love marriage
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…