ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕೆಲಸ ಮಾಡಿದರೆ ತಮ್ಮ ಕಛೇರಿ ಮುಂದೆ ಧರಣಿ ನಡೆಸಲಾಗುವುದು ; ಹರತಾಳು ಹಾಲಪ್ಪ ಎಚ್ಚರಿಕೆ
ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲ್ಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ ಅಧಿಕಾರಿಗಳ ಕಛೇರಿಯ ಮುಂದೆ ಧರಣಿ ನಡೆಸಿ ನ್ಯಾಯ ಕೊಡಿಸುವುದಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಕೆ ನೀಡಿದರು.
ತಾಲೂಕು ಕಛೇರಿ ಆವರಣದಲ್ಲಿ ಬಿಜೆಪಿ ಮಂಡಲ ಶನಿವಾರ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅವರು ಮಾತನಾಡಿ, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಅಭಿವೃದ್ಧಿಯ ವಿಷಯದಲ್ಲಿ ಎಡವಿದ್ದಾರೆ. ಬಡವರು, ರೈತರ ಪರ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ. ರೈತರ ಬಗರ್ಹುಕುಂ ಸಾಗುವಳಿ ಜಮೀನು ತೆರವುಗೊಳಿಸಿದ್ದಷ್ಟೇ ಈವರೆಗಿನ ಇವರ ಸಾಧನೆಯಾಗಿದೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ ಎಂದು ಆಪಾದಿಸಿದರು.
ಸ್ಥಳೀಯ ಶಾಸಕರು ಅಧಿಕಾರಿ ವರ್ಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಕೆಲ ಅಧಿಕಾರಿಗಳು ಸಹಾ ಶಾಸಕರ ಹಿಂಬಾಲಕರಂತೆ ವರ್ತಿಸುತ್ತಿದ್ದಾರೆ. ಇದು ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಶಾಸಕರ ಹಿಂಬಾಲಕರು ಸರ್ಕಾರಿ ಕಛೇರಿಗಳಲ್ಲಿಯೇ ಠಿಕಾಣಿ ಹೂಡಿಕೊಂಡಿದ್ದು, ಜನಸಾಮಾನ್ಯರು ಅಸಹ್ಯ ಪಡುವಂತಾಗಿದೆ ಎಂದು ಕಿಡಿಕಾರಿದರು.
ಆರ್.ಎಸ್.ಎಸ್ ವಿರುದ್ಧ ಬೇಳೂರು ಗೋಪಾಲಕೃಷ್ಣ ಮಾತನಾಡಿದ್ದು (ಬ್ರಿಟಿಷರನ್ನೇ ಓಡಿಸಿದ ಈ ನಮ್ಮ ಕಾಂಗ್ರೆಸ್ ಪಕ್ಷ ಆರ್.ಎಸ್.ಎಸ್ ಯಾವ ಲೆಕ್ಕ) ಇವರು 10 ವರ್ಷದ ಹಿಂದೆ ಆರ್ಎಸ್ಎಸ್ ಚಡ್ಡಿ ಹಾಕಿಕೊಂಡು ಬಿಜೆಪಿಯಿಂದ ಶಾಸಕರಾದವರು ಅದನ್ನು ಮರೆತಂತೆ ಕಾಣುತ್ತಿದ್ದೆ. ಆರ್ಎಸ್ಎಸ್ನ್ನು ಭಾರತ ದೇಶದಿಂದ ಓಡಿಸಲು ಇವರಿಂದ ಸಾಧ್ಯವಿಲ್ಲ ಎಂದರು.
ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆ ಎಂಜಿನಿಯರ್, ಶಿಕ್ಷಣ ಇಲಾಖೆಯ ಅಧಿಕಾರಿಗಳ ಹುದ್ದೆಗಳು ಖಾಲಿ ಉಳಿದಿವೆ. ಜನಸಾಮಾನ್ಯರು ಅಹವಾಲು ಸಲ್ಲಿಸಲು ಕಛೇರಿಗೆ ಬಂದರೆ ಕೇಳುವವರಿಲ್ಲದಂತಾಗಿದೆ. ತಾಲೂಕಿನ ಬಹುತೇಕ ರಸ್ತೆಗಳು ಹೊಂಡ ಬಿದ್ದರೂ ಮುಚ್ಚುವವರಿಲ್ಲದಂತಹ ಸ್ಥಿತಿ ತಲುಪಿವೆ. ಮೊದಲು ಅಭಿವೃದ್ಧಿಯ ಕಡೆ ಗಮನ ಹರಿಸಲಿ ಎಂದರು.
ಮಂಡಲದ ಅಧ್ಯಕ್ಷ ಮತ್ತಿಮನೆ ಸುಬ್ರಮಣ್ಯ ಮಾತನಾಡಿ, ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನು ವಜಾ ಮಾಡುವ ಮೂಲಕ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಯಾವುದೇ ಇಲಾಖೆಯಲ್ಲಿಯೂ ಶಾಸಕರು ಅವರ ಹಿಂಬಾಲಕರು ಕೈಯಾಡಿಸುವ ಕೆಲಸ ನಡೆಯುತ್ತಿದೆ ಅದು ಅಲ್ಲದೆ ಕೆಲವು ಹಿಂಬಾಲಕರು ಶಾಸಕರ ಹೆಸರನ್ನು ಬಳಸಿಕೊಂಡು ಅಧಿಕಾರಿಗಳ ಮುಂದೆ ಕಾಲು ಅಲುಗಡಿಸುತ್ತಾ ಬೆಳಿಗ್ಗೆಯಿಂದ ಸಂಜೆಯವರೆಗೆ ಕುಳಿತಿರುತ್ತಾರೆ. ಈ ಹಿಂಬಾಲಕರಿಗೆ ಯಾರ ಭಯವು ಇಲ್ಲದಾಂತಾಗಿದೆ ಎಂದ ಅವರು, ಆರ್ಎಸ್ಎಸ್ ಸಂಘಟನೆಯನ್ನು ನಿಷೇಧಿಸುವುದಾಗಿ ಹೇಳಿರುವ ಶಾಸಕರ ಹೇಳಿಕೆಯನ್ನು ಖಂಡಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಎನ್.ಆರ್.ದೇವಾನಂದ, ಉಮೇಶ ಕಂಚುಗಾರ್, ಹಾಲಗದ್ದೆ ಉಮೇಶ, ಎನ್ ಶ್ರೀಧರ ಉಡುಪ, ವೀರೇಶ್ ಆಲವಳ್ಳಿ, ಆರ್ಟಿ.ಗೋಪಾಲ, ಸುರೇಶ್ ಸ್ವಾಮಿರಾವ್, ನಾಗಾರ್ಜುನ ಸ್ವಾಮಿ, ಸತ್ಯನಾರಾಯಣ, ಚಾಲುಕ್ಯ ಬಸವರಾಜ್, ಶ್ರೀಪತಿರಾವ್, ಮಂಡಾನಿ ಮೋಹನ್, ಅಭಿಲಾಷ್, ಮಂಜುನಾಥ್ ಸಂಜೀವ, ನಾಗರತ್ನ ದೇವರಾಜ್, ಶಶಿಕಲಾ, ಸುಮಾ ಸುರೇಶ್, ಎನ್.ವೈ.ಸುರೇಶ್, ಬಂಕ್ರಿಬೀಡು ಮಂಜುನಾಥ್, ಪುರುಷೋತ್ತಮ ಶಾನುಭೋಗ್, ನರಲೆ ರಮೇಶ, ಸವಿತಾ, ನಿರ್ಮಾಲ ರಾಘವೇಂದ್ರ, ಗಾಯಿತ್ರಿ ನಾಗರಾಜ್, ಕೃಷ್ಣವೇಣಿ, ಮನೋಧರ, ನಗರ ನಿತಿನ್, ಕಾರಣಗಿರಿ ಕಾವ್ಯ, ಕಾವೇರಿ ವಿಜಯ, ಮಾವಿನಕೊಪ್ಪ ಗೌತಮ್, ಮಹೇಂದ್ರ, ಮತ್ತಿತರರು ಇದ್ದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…