ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ
ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ, ಉತ್ಸವಗಳು ನೆರವೇರಿದವು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ ಪೂಜಾ ವಿಧಿಗಳು ಪೂರ್ವ ಪರಂಪರೆಯಂತೆ ಸಂಪನ್ನಗೊಂಡಿತು.
ಒಂಬತ್ತು ದಿನಗಳ ಪರ್ಯಂತ ನಿತ್ಯಪೂಜೆ ವಿಧಿ ಸಹಿತ ಫಲ-ಪುಷ್ಪ-ದ್ರವ್ಯ-ವಿಶೇಷ ನೈವೇದ್ಯ ಅರ್ಪಿಸುವ ಮೂಲಕ ಧಾರ್ಮಿಕ ಹಿನ್ನೆಲೆ ಭಕ್ತವೃಂದದವರು ಮನನ ಮಾಡುವಂತಾಯಿತು.
ಸ್ವಸ್ತಿಶ್ರೀಗಳವರು “ನವರಾತ್ರಿ ಪರ್ವವು ಆತ್ಮೋನ್ನತಿಗಾಗಿ ದೇವರ ಧ್ಯಾನ, ಸ್ವಾದ್ಯಾಯ, ಸ್ತ್ರೋತ್ರ ಸ್ತುತಿಸುವುದು, ಸಂಗೀತ, ನಾಟ್ಯ ವಾದ್ಯಗೋಷ್ಠಿಯೊಂದಿಗೆ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಳ್ಳಲು, ನವೋಲ್ಲಾಸದ ಜೀವನ ಪಥದಲ್ಲಿ ಸಾಧನೆ ಮಾಡಲು ಸಾಧ್ಯ” ಎಂದು ವಿವರಿಸುತ್ತಾ, “ಸಾಮೂಹಿಕ ಪ್ರಾರ್ಥನೆ-ಪೂಜೆಗಳಿಂದ ಕಲ್ಮಶರಹಿತ ಮನೋಭಾವವು ಚೈತನ್ಯವನ್ನು ನೀಡಿದೆ. ಇದು ದಿವ್ಯೌಷಧ” ಎಂದು ಭಕ್ತರನ್ನು ಹರಸಿ, ಶ್ರೀಫಲ ಮಂತ್ರಾಕ್ಷತೆ.
ಪ್ರಾತಃಕಾಲ ಕುಮುದ್ವತಿ ತೀರ್ಥದಿಂದ ಅಗ್ರೋದಕ ತರ. ಶ್ರೀ ನೇಮಿನಾಥ ಸ್ವಾಮಿ, ಶ್ರೀ ಮಹಾವೀರ ಸ್ವಾಮಿ, ಶ್ರೀ ಆದಿನಾಥ ಸ್ವಾಮಿ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀ ಸರಸ್ವತಿ ದೇವಿ, ಶ್ರೀ ಕ್ಷೇತ್ರಪಾಲ ಹಾಗೂ ಶ್ರೀ ನಾಗಸನ್ನಿಧಿಯಲ್ಲಿ ಧಾರ್ಮಿಕ ವಿಧಿಗಳು ನಡೆದವು. ತ್ರಿಕೂಟ ಜಿನಾಲಯ, ಬೋಗಾರ ಬಸದಿ, ಮಕ್ಕಳ ಬಸದಿ, ನಗರ ಜಿನಾಲಯಗಳಲ್ಲಿ ಪೂಜೆ ಸಲ್ಲಿಸಲಾಯಿತು.
ಶ್ರೀಕ್ಷೇತ್ರದ ಜೈನ ಮಠದ ವಾಹನ, ಶಾಲಾ ಮಕ್ಕಳ ವಾಹನ, ಕೃಷಿ ಯಂತ್ರೋಪಕರಣಗಳ ಪೂಜೆಯನ್ನು ಶ್ರೀಗಳವರ ಸಾನಿಧ್ಯದಲ್ಲಿ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಗಜರಾಣಿ ಐಶ್ವರ್ಯ, ಅಶ್ವಗಳಾದ ಪವನ, ಮಾನವಿ, ಚೇತಕ್ ಅಶ್ವಗಳನ್ನು ಶೃಂಗರಿಸಲಾಯಿತು.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…