ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್ ಪೆಕ್ಟರ್ ಗಳು ವರ್ಗಾವಣೆ

Many sub-inspectors in Shivamogga district transferred

ಶಿವಮೊಗ್ಗ : ಪೂರ್ವ ವಲಯ ವ್ಯಾಪ್ತಿಯ ೩೫ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಈ ವರ್ಗಾವಣೆಯ ಮೂಲಕ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐಗಳಿಗೆ ಹೊಸ ನಿಯೋಜನೆ ದೊರೆತಿದೆ.

ಟಿ.ಎಂ. ನಾಗರಾಜು : ಸಾಗರ ಟೌನ್‌ನಿಂದ ಹಾವೇರಿ ಟೌನ್ ಪೊಲೀಸ್ ಠಾಣೆಗೆ

ಆರ್.ಹೆಚ್. ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್‌ನಿಂದ ಭದ್ರಾವತಿ ಟ್ರಾಫಿಕ್ ಠಾಣೆಗೆ

ಅಕ್ಬರ್ ಮುಲ್ಲಾ : ಶಿಕಾರಿಪುರದಿಂದ ಶಿವಮೊಗ್ಗ ಪೂರ್ವ ಟ್ರಾಫಿಕ್ ಠಾಣೆಗೆ

ಸ್ವಪ್ನ ಎಲ್. : ಶಿವಮೊಗ್ಗ ಗ್ರಾಮಾಂತರದಿಂದ ಶಿವಮೊಗ್ಗ ಪಶ್ಚಿಮ ಸಂಚಾರ ಠಾಣೆಗೆ

ಸಿದ್ದಪ್ಪ : ತುಂಗಾನಗರದಿಂದ ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಠಾಣೆಗೆ

ಕೃಷ್ಣಕುಮಾರ್ ಮಾನೆ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್‌ನಿಂದ ಭದ್ರಾವತಿ ಪೇಪರ್ ಟೌನ್ ಠಾಣೆಗೆ

ಈ. ಕವಿತ : ಪೇಪರ್ ಟೌನ್‌ನಿಂದ ಭದ್ರಾವತಿ ನ್ಯೂಟೌನ್ ಠಾಣೆಗೆ

ಶಿವಾನಂದ ಧರೇನವರ್ : ಮಾಳೂರಿನಿಂದ ದಾವಣಗೆರೆಯ ಕೆಟಿಜೆ ನಗರ ಠಾಣೆಗೆ

ಸುನಿಲ್ ಬಿ.ಸಿ. : ತೀರ್ಥಹಳ್ಳಿಯಿಂದ ದಾವಣಗೆರೆ ವಿದ್ಯಾನಗರ ಠಾಣೆಗೆ

ಶೋಭಾರಾಣಿ ಕೆ.ಎಸ್. : ಶಿಕಾರಿಪುರ ಗ್ರಾಮಾಂತರದಿಂದ ದಾವಣಗೆರೆ ನ್ಯಾಮತಿ ಠಾಣೆಗೆ

ಮಲ್ಲಾರೆಪ್ಪ ಜಿ. ವಗ್ಗಣ್ಣವರ : ಶಿವಮೊಗ್ಗ ಗ್ರಾಮಾಂತರದಿಂದ ಹಾವೇರಿ ಟೌನ್ ಠಾಣೆಗೆ

ಟ್ರಾಫಿಕ್ ಎಸ್‌ಐಗಳು ವಲಯ ಕಚೇರಿಗೆ

ಶಿವಮೊಗ್ಗ ಜಿಲ್ಲೆಯ ಮೂವರು ಟ್ರಾಫಿಕ್ ಸಬ್‌ಇನ್ಸ್‌ಪೆಕ್ಟರ್‌ಗಳಿಗೆ ಸ್ಥಳ ನಿರೀಕ್ಷಣೆ ನೀಡಲಾಗಿದ್ದು, ವಲಯ ಕಚೇರಿಗೆ ಕರೆಯಿಸಿಕೊಳ್ಳಲಾಗಿದೆ. ಇವರಲ್ಲಿ,

ಶಿವಮೊಗ್ಗ ಪೂರ್ವ ಸಂಚಾರ ಠಾಣೆಯ ನವೀನ್ ವಿ. ಮಠಪತಿ,

ಶಿವಮೊಗ್ಗ ಪಶ್ಚಿಮ ಸಂಚಾರ ಠಾಣೆಯ ತಿರುಮಲೇಶ್,

ಭದ್ರಾವತಿ ನ್ಯೂಟೌನ್ ಠಾಣೆಯ ಭಾರತಿ ಎಸ್.ಎನ್. ಸೇರಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

6 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

10 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

10 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

11 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

17 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

19 hours ago