ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹುಂಚಾ : ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ, ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳ ಕೃಪಾಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ, ಮೆಗ್ಗಾನ್ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಸೇರಿದಂತೆ ವಿವಿಧ ಸಾಮಾಜಿಕ ಸಂಘ‧ಸಂಸ್ಥೆಗಳ ಸಹಯೋಗದಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ನಾಳೆ (29-10-2025) ನಡೆಯಲಿದೆ.
ಶಿಬಿರವು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಹುಂಚಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದ್ದು, ಗಂಡು–ಹೆಣ್ಣು ಭೇದವಿಲ್ಲದೆ 18 ರಿಂದ 60 ವರ್ಷದೊಳಗಿನ, 50 ಕೆ.ಜಿ.ಗಿಂತ ಹೆಚ್ಚು ತೂಕದ ಆರೋಗ್ಯವಂತರು ರಕ್ತದಾನದಲ್ಲಿ ಭಾಗವಹಿಸಬಹುದು.
ರಕ್ತದಾನದ ಮೊದಲು ಉಚಿತ ಆರೋಗ್ಯ ತಪಾಸಣೆ (ಹಿಮೋಗ್ಲೋಬಿನ್, ರಕ್ತದೊತ್ತಡ ಇತ್ಯಾದಿ) ಮಾಡಲಾಗುತ್ತದೆ. ಶಿಬಿರದಲ್ಲಿ ಭಾಗವಹಿಸುವ ದಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವುದು.
ಅಪಘಾತ, ಶಸ್ತ್ರಚಿಕಿತ್ಸೆ ಹಾಗೂ ಹೆರಿಗೆ ಸಮಯದಲ್ಲಿ ಉಂಟಾಗುವ ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು, ಮಾನವ ದೇಹವೇ ರಕ್ತವನ್ನು ಉತ್ಪಾದಿಸುವ ಏಕೈಕ ಮೂಲ. ರಕ್ತದಾನದಿಂದ ಅನೇಕ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ :
ಡಾ. ನಿತೀಶ್ ಎಚ್.ಆರ್ – 9738672240
ಸುಮಂಗಲ ದೇವರಾಜ್ – 9741651716
ನಾಗರತ್ನಮ್ಮ – 9880981858
ಗ್ರಾಮ ಪಂಚಾಯ್ತಿ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಹಲವು ಸಂಘ ಸಂಸ್ಥೆಗಳು ಶಿಬಿರದಲ್ಲಿ ಭಾಗವಹಿಸಲು ಗ್ರಾಮಸ್ಥರಿಗೆ ಮನವಿ ಮಾಡಿದ್ದಾರೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…