ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು
ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಫ್ರೀದ್ (40) ಮೃತ ಆಟೋ ಚಾಲಕ. ಈತ ಮೂಲತಃ ಬಂಗಾರಪೇಟೆಯ ಎಲೆಸಂದ್ರ ಗ್ರಾಮದವರಾಗಿದ್ದು, ಪ್ರಸ್ತುತ ಬೆಂಗಳೂರಿನ ಅಂಜನಾನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು.
ಮನೆಗೆ ಹೋಗದೆ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅಫ್ರೀದ್ನನ್ನು ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹಿಂಬದಿ ಹಾಕಿಕೊಂಡು ಕೋಲಾರದ ಎಂಪೈರ್ ಹೊಟೇಲ್ ಬಳಿ ಇರುವ ಅಪಾರ್ಟ್ಮೆಂಟ್ ಬಳಿ ಆಟೋ ತಂದು ನಿಲ್ಲಿಸಿ ಹೋಗಿದ್ದಾರೆ.
ಇಂದು ಮುಂಜಾನೆ 4.30ರ ಸಂದರ್ಭದಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೇರೆಲ್ಲೋ ಕೊಲೆ ಮಾಡಿ ಆಟೋದಲ್ಲಿ ತಂದು ನಿಲ್ಲಿಸಿ ದುಷ್ಕರ್ಮಿಗಳು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ.
ಈತ ಊರಿಗೆ ಹೋಗುತ್ತಿರಲಿಲ್ಲ. ಬೆಂಗಳೂರಿನಿಂದ ಇಲ್ಲಿಗೆ ಹೇಗೆ ಬಂದ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಆತನ ದೇಹದ ಹಲವು ಭಾಗಗಳಿಗೆ ಇರಿಯಲಾಗಿದೆ. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…
ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…