ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ
ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ.
ಪಿಯುಸಿ ಓದುತ್ತಿದ್ದ ಸೌಜನ್ಯ
ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ ಗಂಗಾ ವತಿಯಲ್ಲಿ ಪ್ರಥಮ ಪಿಯುಸಿ ಅಭ್ಯಾಸ ಮಾಡುತ್ತಿದ್ದ ಸೌಜನ್ಯ (17) ಅಮವಾಸ್ಯೆ ದಿನ ಸಂಜೆ ಮನೆಯಿಂದ ನಾಪತ್ತೆಯಾಗಿದ್ದು ಗಾಬರಿಗೊಂಡ ಪಾಲಕರು ಸಂಬಂಧಿಕರ ಮನೆಗಳಲ್ಲಿ ಮಗಳಿಗಾಗಿ ಹುಡುಕಾಟ ನಡೆಸಿದ್ದರು. ಎಲ್ಲಿಯೂ ಮಗಳು ಸಿಗದೆ ಹೋದ ಸಂಧರ್ಭದಲ್ಲಿ ಅ.24 ಶುಕ್ರ ವಾರ ಮಗಳು ಕಾಣದಿರುವ ಕುರಿತಂತೆ ಕೊಡೇಕಲ್ ಠಾಣೆಯಲ್ಲಿ ನಾಪತ್ತೆ ಹಾಗೂ ಅಪಹರಣ ಕುರಿತಾಗಿ ಪ್ರಕರಣ ದಾಖಲಿಸಿದ್ದರು.
ಕಾಲುವೆಯಲ್ಲಿ ಪತ್ತೆಯಾದ ಶವ
ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದ್ದರೆ, ಅತ್ತ ಶಹಾಪೂರ ತಾಲೂಕಿನ ಗೋಗಿ ಗ್ರಾಮದ ಸೇವಾ ನಾಯಕ ತಾಂಡಾ ಬಳಿ ಭೋರುಕಾ ಕೃಷ್ಣಾ ಕಾಲುವೆಯಲ್ಲಿ ಹೆಣ್ಣು ಮಗಳೊಬ್ಬಳ ಶವ ದೊರೆ ತಿರುವ ಕುರಿತಂತೆ ಮಾಹಿತಿ ಬಂದಿತ್ತು. ಗೋಗಿ ಪೊಲೀಸ್ ಠಾಣೆಯವರರು ಕಾಲುವೆಯಲ್ಲಿ ಗುರುತು ಸಿಗದ ಸ್ಥಿತಿಯಲ್ಲಿದ ಶವದ ಫೋಟೋವನ್ನು ಕೊಡೇಕಲ್ ಪೊಲೀಸ್ ಅಪ್ರಾಪ್ತ ಸೌಜನ್ಯಳ ಪಾಲಕರು ಇವಳು ತಮ್ಮ ಮಗಳು ಎಂದು ಗುರುತಿಸಿದ್ದಾರೆ.
ಹುಣಸಗಿ ಸಿಪಿಐ ವಾಹನಕ್ಕೆ ಘೇರಾವು ಹಾಕಿದ ಪೋಷಕರು & ಗ್ರಾಮಸ್ಥರು
ಶನಿವಾರ ಸಂಜೆ ಮೃತ ಸೌಜನ್ಯಳ ಶವವನ್ನು ಆಂಬ್ಯೂಲೆನ್ಸ್ ನಲ್ಲಿ ಕೊಡೇಕಲ್ ಗ್ರಾಮಕ್ಕೆ ಕರೆ ತಂದ ಸಂದರ್ಭದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಹುಣಸಗಿ ಸಿಪಿಐ ವಾಹನಕ್ಕೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಫೇರಾವು ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ, ಸೌಜನ್ಯಳ ಸಾವು ಆತ್ಮ*ಹತ್ಯೆಯಲ್ಲ ನನ್ನ ಮಗಳನ್ನು ಕೊ*ಲೆ ಮಾಡಿ ಶವವವನ್ನು ಕಾಲುವೆಗೆ ಹಾಕಿದ್ದಾರೆ ಎಂದು ಸೌಜನ್ಯಳ ತಂದೆ ಶರಣಪ್ಪ ಹಾಗೂ ಸಂಬಂಧಿಕರು ಆರೋಪಿಸಿ, ಕೊಲೆಗಾರರ ಬಂಧಿಸುವಂತೆ ಆಗ್ರಹಿಸಿದರು.
ಸಾವಿನಲ್ಲಿ ಶಂಕೆ ವ್ಯಕ್ತಪಡಿಸಿ ದೂರು ದಾಖಲು
ಶವ ಪರೀಕ್ಷೆಯನ್ನು ನಡೆಸಲಾಗಿದ್ದು, ವರದಿ ಬಂದ ನಂತರವಷ್ಟೆ ಸಾವಿಗೆ ನಿಖರ ಕಾರಣ ಗೊತ್ತಾಗುತ್ತದೆ. ಒಂದು ವೇಳೆ, ಇದು ಕೊಲೆಯೇ ಆಗಿದ್ದರೆ ಆರೋಪಿಗಳನ್ನು ಬಂಧಿಸುವುದಾಗಿ ಸಿಪಿಐ ರವಿಕುಮಾರ ಹೇಳಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಭೋರುಕಾ ಕಾಲುವೆಯಲ್ಲಿ ದೊರೆತ ಶವ ಹೊರತೆಗೆದಿರುವ ಗೋಗಿ ಠಾಣೆಯಲ್ಲೂ ಕೂಡಾ ಸಾವಿನಲ್ಲಿ ಶಂಕೆ ವ್ಯಕ್ತಪಡಿಸಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…