ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ

ರಿಪ್ಪನ್‌ಪೇಟೆ : “ತಮ್ಮ ಅಭಿನಯ, ಸರಳತೆ ಮತ್ತು ಹೃದಯ ಶ್ರೀಮಂತಿಕೆಯ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ” ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಜಿ.ಆರ್ ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ನಡೆದ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಪ್ಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಅವರು ಮುಂದುವರೆದು, “ಪುನೀತ್ ರಾಜ್‌ಕುಮಾರ್ ಸದ್ದಿಲ್ಲದೆ ಜನಪರ ಕೆಲಸಗಳನ್ನು ಮಾಡುತ್ತಿದ್ದರು. ಆ ಸೇವಾಭಾವವೇ ಅವರನ್ನು ಇಂದಿಗೂ ಜನಮನಗಳಲ್ಲಿ ಶಾಶ್ವತಗೊಳಿಸಿದೆ. ಅವರ ಪ್ರೀತಿಗೆ ಮೌಲ್ಯ ಕಟ್ಟಲು ಸಾಧ್ಯವಿಲ್ಲ. ಅವರ ಜೀವನ ಸ್ಮರಣೀಯ ಪಾಠ. ಪುನೀತ್‌ ಅವರ ಮಾನವೀಯ ಮೌಲ್ಯಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು” ಎಂದು ಹೇಳಿದರು.

ಕಸ್ತೂರಿ ಕನ್ನಡ ಸಂಘದ ಮಾಜಿ ಅಧ್ಯಕ್ಷ ಅರ್ ಎ ಚಾಬುಸಾಬ್ ಮಾತನಾಡಿ ಬಾಲ್ಯದಲ್ಲಿಯೇ ಸಿನಿಮಾ ಜಗತ್ತಿಗೆ ಕಾಲಿಟ್ಟ ಅಪ್ಪು ಪ್ರೇಕ್ಷಕರಿಗೆ ಮನರಂಜನಾ ಸಿನಿಮಾದ ಔತಣ ನೀಡಿದರು. ನಾಲ್ಕನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ಅವರ ಸಮಾಜಮುಖಿ ಸಂದೇಶ ನೀಡುವ ಚಲನಚಿತ್ರಗಳು ಕೇವಲ ಮನರಂಜನೆಯನ್ನು ಮಾತ್ರವಲ್ಲದೆ ಪ್ರಮುಖ ಸಾಮಾಜಿಕ ಸಂದೇಶಗಳನ್ನ ನೀಡುವಂತಹ ಸಿನಿಮಾಗಳನ್ನ ಮಾಡಿ ನಮ್ಮೆಲ್ಲರಿಗೆ ಪ್ರೇರಣೆ ನೀಡಿದ್ದಾರೆ.ಅಪ್ಪು ಕೇವಲ ಸಿನೆಮಾಗಳಿಗೆ ಮಾತ್ರ ಸೀಮಿತವಾಗಿರದೆ ಸಿನೆಮಾಗಳಲ್ಲಿ ತೋರಿಸಿದ ರೀತಿಯಲ್ಲೇ ನಿಜ ಜೀವನದಲ್ಲಿ ಅನೇಕ ಸಮಾಜಮುಖಿ ಸೇವೆಗಳನ್ನು ಮಾಡಿ ಜನರಿಗೆ ಸ್ಪೂರ್ತಿ ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಪುನೀತ್ ಅಭಿಮಾನಿ ಬಳಗದ ಅಧ್ಯಕ್ಷೆ ಶೀಲಾ ಆರ್.ಡಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, ಕಸ್ತೂರಿ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್, ಹಸನಬ್ಬ ಸಂಘದ ಪ್ರಮುಖ ಬಂಡಿ ನೇಮಣ್ಣ, ಆಸೀಫ್ ಭಾಷಾ, ನಿರೂಪ್ ಕುಮಾರ್, ಲೇಖನಾ ಚಂದ್ರನಾಯ್ಕ್, ಸಾಜೀದಾ ಹನೀಫ಼್ , ಪಿಯೂಸ್ ರೊಡ್ರಿಗಸ್, ಮಂಜುನಾಥ್ ಮಳವಳ್ಳಿ, ವಾಣಿ ಗೋವಿಂದಪ್ಪಗೌಡ, ಪ್ರಕಾಶ್ ಪಾಲೇಕರ್, ಶಂಶುದ್ದೀನ್ ಆರ್.ಎಸ್, ವಿಜಯ್ ಮಳವಳ್ಳಿ, ನಿರಂಜನ್ ಕನ್ನಡಿಗ, ರಾಘು ಇಂಜಿನಿಯರ್ , ಅರುಣ್ ಮಲ್ಲಾಪುರ , ಮೈದೀನ್ ಆರ್ ಹೆಚ್ ಹಾಗೂ ಇನ್ನಿತರರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

4 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

5 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

5 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

10 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

11 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

14 hours ago