RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ
ರಿಪ್ಪನ್ಪೇಟೆ: ಪಟ್ಟಣದಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಪೊಲೀಸರು ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ವಶಕ್ಕೆ ಪಡೆದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಅಕ್ಟೋಬರ್ 19ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕಣಬಂದೂರಿನ ವ್ಯಕ್ತಿಯೊಬ್ಬರು ಸತ್ಕಾರ ಲಾಡ್ಜ್ ಮುಂಭಾಗ, ರಾಧಾಕೃಷ್ಣ ಜ್ಯೂವೆಲರಿ ಪಕ್ಕದಲ್ಲಿ ಕೆಎ 14 ಇಎ 9708 ನೊಂದಣೆಯ ಹಿರೋ ಹೋಂಡಾ ಬೈಕ್ ನಿಲ್ಲಿಸಿದ್ದರು.ಸ್ವಲ್ಪ ಹೊತ್ತಿನ ನಂತರ ಮರಳಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದ್ದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದೆ ತಡವಾಗಿ ಠಾಣೆಗೆ ದೂರು ನೀಡಲಾಗಿತ್ತು.
ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಖಚಿತ ಮಾಹಿತಿಯ ಆಧಾರದ ಮೇಲೆ ಹೊಸನಗರ ಸಮೀಪದ ಮಾವಿನಕಟ್ಟೆ ಗ್ರಾಮದ ಹೂವಪ್ಪ ಎಂಬಾತನನ್ನು ಪಿಎಸ್ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಆರೋಪಿ ಬೈಕ್ ಕಳ್ಳತನ ಎಸಗಿರುವುದಾಗಿ ಒಪ್ಪಿಕೊಂಡಿದ್ದು, ಪೊಲೀಸರು ಆರೋಪಿ ಹಾಗೂ ಕಳ್ಳತನವಾದ ಬೈಕ್ನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ ಕೊರವರ , ರಾಮಚಂದ್ರ , ಪರಮೇಶ್ವರಪ್ಪ ಹಾಗೂ ಅವಿನಾಶ್ ಇದ್ದರು.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…