ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ.

ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ.

ಹೊಸನಗರ: ದೇಶದ ಸಾಂಸ್ಕೃತಿಕ ಪರಂಪರೆಯ ಹಿರಿಯ ಕಲಾ ಪ್ರಕಾರಗಳಲ್ಲಿ ಒಂದಾದ ಯಕ್ಷಗಾನ ಕಲೆ ಆರಾಧಕರಾದ ಯಕ್ಷ ಕಲಾವಿದರಿಗೆ ರಾಜಾಶ್ರಯ ಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಸಾಧಕ ಪ್ರತಿಭಾವಂತ ಹಿರಿಯ ಕಲಾವಿದರನ್ನು ಗೌರವಿಸುವ ಕೆಲಸ ಮಾಡಬೇಕಾಗಿದೆ ಎಂದು ಹಿರಿಯ ಕಲಾವಿದ ಪುರಂದರ ಹೆಗಡೆ ಹೇಳಿದರು.


ತಾಲ್ಲೂಕಿನ ಕಾರ್ಗಿಲ್ ಸಿದ್ಧಿವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ನಡೆದ ಹೆರಂಜಾಲು ಷಷ್ಠಬ್ಬಿ ಯಕ್ಷ ಕಾರ್ಯಕ್ರಮದಲ್ಲಿ ಕೂಡ ಮಾಡುವ ಹೆರಂಜಾಲು ಗೌರವ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಕಲೆ ಉಳಿದು ಬೆಳೆಯುವಲ್ಲಿ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ ಕಲಾವಿದರಿಗೆ ಸರ್ಕಾರ ಸದಾ ಎಲ್ಲಾ ತೆರನಾದ ಪ್ರೋತ್ಸಾಹ ನೀಡಬೇಕಾಗಿದೆ. ಕನ್ನಡ ನಾಡು ನುಡಿ, ನೆಲ ಜಲ, ಇಲ್ಲಿನ ಸಂಸ್ಕೃತಿ, ಆಚಾರ ವಿಚಾರಗಳಲ್ಲಿ ಕಲಾವಿದರ ಪಾತ್ರ ದೊಡ್ಡದು. ಯಕ್ಷಗಾನ ಕಲಾ ಪ್ರಾಕಾರದಲ್ಲಿ ಶುದ್ದ ಕನ್ನಡವನ್ನೇ ಪ್ರಯೋಗಿಸಲಾಗುತ್ತಿದೆ. ಪದ್ಯ ಅರ್ಥದಲ್ಲಿ ಕನ್ನಡ ಭಾಷೆ ಬಳಸಲಾಗುತ್ತದೆ. ಕಲಾವಿದ ಎಲ್ಲೂ ಆಂಗ್ಲ ಭಾಷೆ ಬಳಸುವುದಿಲ್ಲ. ಕನ್ನಡ ನಾಡು ನುಡಿ ರಕ್ಷಣೆಗೆ ಯಕ್ಷಗಾನ ಕಲಾವಿದರು ಅಳಿಲು ಸೇವೆ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರಕ್ಕೆ ಯಕ್ಷಗಾನ ಕಲಾವಿದರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗುರುತಿಸಬೇಕು.  ಹೆಚ್ಚು ಹೆಚ್ಚು ಪ್ರಶಸ್ತಿ ಪುರಸ್ಕಾರಗಳು ಯಕ್ಷಗಾನದತ್ತ ಹರಿದು ಬರಬೇಕು ಎಂದರು.

ಹಿರಿಯ ಭಾಗವತ ಹೆರಂಜಾಲು ಗೋಪಾಲ ಗಾಣಿಗ ಆಶಯ ಭಾಷಣ ಮಾಡಿದರು. ರಾಮಚಂದ್ರಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ರಹ್ಮಣ್ಯ ಹನಿಯ , ಮಾಮ್ಕೋಸ್ ನಿರ್ದೇಶಕ ಕೆ.ವಿ.ಕೃಷ್ಣಮೂರ್ತಿ, ಪತ್ರಕರ್ತ ನಾರವಿ ಹೊಸನಗರ, ಕಣಿವೆ ಬಾಗಿಲು ಶಂಕರಭಟ್, ಹಿರಿಯ ಭಾಗವತ ಮಾರ್ವಿ ನಿತ್ಯಾನಂದ ಹೆಬ್ಬಾರ್ ಮತ್ತಿತರರು ಇದ್ದರು.


ನಂತರ ಹೆರಂಜಾಲು ಯಕ್ಷ ಬಳಗ ವತಿಯಿಂದ ಪಂಚವಟಿ ಹಾಗೂ
ಶ್ರೀ ಕೃಷ್ಣ ಪರಂಧಾಮ ಪ್ರಸಂಗ ಪ್ರದರ್ಶನ ನಡೆಯಿತು.
ಕಲಾವಿದರಾಗಿ ಹೆರಂಜಾಲು ಗೋಪಾಲ ಗಾಣಿಗ, ಉದಯ ಹೊಸಾಳ, ರಾಘವೇಂದ್ರ ಹೆಗಡೆ, ಶಶಿಕಾಂತ ಶೆಟ್ಟಿ ಕಾರ್ಕಳ, ಈಶ್ವರ ನಾಯ್ಕ ಮಂಕಿ, ಚಂದ್ರ ಕುಲಾಲ್ ನೀರ್ಜಡ್ಡು, ಶೇಖರ್ ಶೆಟ್ಟಿ ಮತ್ತಿತರರು ಇದ್ದರು.
ಪತ್ರಕರ್ತೆ ಅಶ್ವಿನಿ ಪಂಡಿತ್ ಕಾರ್ಯಕ್ರಮ ನಿರ್ವಹಿಸಿದರು.
ಚಿತ್ರ. ಹೊಸನಗರ ತಾಲ್ಲೂಕಿನ ಕಾರ್ಗಡಿ ಸಿದ್ಧಿವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಪುರಂದರ ಹೆಗಡೆ ಅವರನ್ನು ಸನ್ಮಾನಿಸಲಾಯಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago