ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ
ಆನಂದಪುರ: ಖಚಿತ ಮಾಹಿತಿಯ ಆಧಾರದಲ್ಲಿ ಆನಂದಪುರ ಪೊಲೀಸ್ ಠಾಣೆಯ ಪಿಎಸೈ ಪ್ರವೀಣ್ ಎಸ್.ಪಿ. ಅವರ ನೇತೃತ್ವದ ಪೊಲೀಸರು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾಗರ ತಾಲ್ಲೂಕಿನ ಆನಂದಪುರದ ಸುತ್ತಮುತ್ತ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಐಜಿ ಸ್ಕ್ವಾಡ್ನಿಂದ ಸ್ಥಳೀಯ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ತಪಾಸಣೆ ಕೈಗೊಂಡು ರೇಡ್ ನಡೆಸಿದರು.
ಬಸವನಹೊಂಡ ಗ್ರಾಮದ ಕೆಂಜಿಗಾಪುರ ಕ್ರಾಸ್ ಬಳಿಯ ಹೊಸನಗರ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ಕಾಯುತ್ತಿದ್ದ ತಂಡವು ಸಂಶಯಾಸ್ಪದ ಲಾರಿಯನ್ನು ತಡೆದಾಗ, ಚಾಲಕ ಲಾರಿಯನ್ನು ರಸ್ತೆಯ ಬದಿಗೆ ನಿಲ್ಲಿಸಿ ಸ್ಥಳದಿಂದ ಪರಾರಿಯಾದಾನೆ.
ಪೊಲೀಸರು ನಂತರ ಲಾರಿಯನ್ನು ಸೀಜ್ ಮಾಡಿ ಠಾಣೆಗೆ ಕೊಂಡೊಯ್ದಿದ್ದು, ಅಕ್ರಮ ಮರಳು ಸಾಗಣೆ ಕುರಿತಾಗಿ ಪ್ರಕರಣ ದಾಖಲಿಸಿದ್ದಾರೆ. ಮುಂದಿನ ತನಿಖೆ ಮುಂದುವರಿದಿದೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…