ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ
ಶಿವಮೊಗ್ಗ ನಗರ ಆಯನೂರು ಗೇಟ್ ಬಳಿ ಭಾನುವಾರ ಮಧ್ಯಾಹ್ನ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರಲ್ಲಿ ಒಬ್ಬರಿಗೆ ತೀವ್ರ ರೀತಿಯಲ್ಲಿ ತಲೆಗೆ ಪೆಟ್ಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಫುಡ್ ಡೆಲಿವರಿ ಬಾಯ್ ಸಿಗ್ನಲ್ ಬ್ರೇಕ್ ಮಾಡಿ ಅಜಾಗರೂಕವಾಗಿ ಬೈಕ್ ಚಲಾಯಿಸಿದ್ದು, ಇದನ್ನು ತಪ್ಪಿಸಲು ಶರಾವತಿ ನಗರದ ಕಡೆಯಿಂದ ಬರುತ್ತಿದ್ದ ಎರಿಟಿಗಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದೆ. ನಂತರ ಸಿಗ್ನಲ್ ಬಳಿ ನಿಂತಿದ್ದ ಇತರೆ ವಾಹನಗಳ ಮೇಲೆ ಹರಿದು ಸರಣಿ ಅಪಘಾತಕ್ಕೆ ಕಾರಣವಾಗಿದೆ.
ಈ ಅವಘಡದಲ್ಲಿ ಮೂರು ಬೈಕ್ಗಳು ಹಾಗೂ ಎರಡು ಕಾರುಗಳು ಜಖಂ ಆಗಿದ್ದು, ಕಿರಣ್, ಅರುಣ್ ಮತ್ತು ಪ್ರವೀಣ ಎಂದು ಗುರುತಿಸಲಾದ ಯುವಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಕಾರ್ಯಾಚರಣೆ ಭಾಗವಾಗಿ ಅಪಘಾತಕ್ಕೊಳಗಾದ ವಾಹನಗಳನ್ನು ಠಾಣೆಗೆ ರವಾನಿಸಲಾಗಿದ್ದು, ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…