ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ
ಶಿವಮೊಗ್ಗ ನಗರ ಆಯನೂರು ಗೇಟ್ ಬಳಿ ಭಾನುವಾರ ಮಧ್ಯಾಹ್ನ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರಲ್ಲಿ ಒಬ್ಬರಿಗೆ ತೀವ್ರ ರೀತಿಯಲ್ಲಿ ತಲೆಗೆ ಪೆಟ್ಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಫುಡ್ ಡೆಲಿವರಿ ಬಾಯ್ ಸಿಗ್ನಲ್ ಬ್ರೇಕ್ ಮಾಡಿ ಅಜಾಗರೂಕವಾಗಿ ಬೈಕ್ ಚಲಾಯಿಸಿದ್ದು, ಇದನ್ನು ತಪ್ಪಿಸಲು ಶರಾವತಿ ನಗರದ ಕಡೆಯಿಂದ ಬರುತ್ತಿದ್ದ ಎರಿಟಿಗಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದೆ. ನಂತರ ಸಿಗ್ನಲ್ ಬಳಿ ನಿಂತಿದ್ದ ಇತರೆ ವಾಹನಗಳ ಮೇಲೆ ಹರಿದು ಸರಣಿ ಅಪಘಾತಕ್ಕೆ ಕಾರಣವಾಗಿದೆ.
ಈ ಅವಘಡದಲ್ಲಿ ಮೂರು ಬೈಕ್ಗಳು ಹಾಗೂ ಎರಡು ಕಾರುಗಳು ಜಖಂ ಆಗಿದ್ದು, ಕಿರಣ್, ಅರುಣ್ ಮತ್ತು ಪ್ರವೀಣ ಎಂದು ಗುರುತಿಸಲಾದ ಯುವಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಕಾರ್ಯಾಚರಣೆ ಭಾಗವಾಗಿ ಅಪಘಾತಕ್ಕೊಳಗಾದ ವಾಹನಗಳನ್ನು ಠಾಣೆಗೆ ರವಾನಿಸಲಾಗಿದ್ದು, ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…