ಕೇಬಲ್ ಕಳವು ಮಾಡುತಿದ್ದ ಇಬ್ಬರು ಆರೋಪಿಗಳು ರಿಪ್ಪನ್ಪೇಟೆ ಪೊಲೀಸರ ಬಲೆಗೆ
ರಿಪ್ಪನ್ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ನಡೆದ ಕೇಬಲ್ ಕಳವು ಪ್ರಕರಣದಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್ಪೇಟೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಪತ್ತೆಹಚ್ಚಿ ಬಂಧಿಸಲು ಯಶಸ್ವಿಯಾಗಿದ್ದಾರೆ.
ಅರಸಾಳು ಗ್ರಾಮದ ಮಂಜ ಮತ್ತು ನಾಗ ಬಂಧಿತ ಆರೋಪಿಗಳಾಗಿದ್ದಾರೆ.
ಅರಸಾಳು ಗ್ರಾಮದಲ್ಲಿ ಹೊಳೆ ಬದಿಯಲ್ಲಿ ಮೋಟಾರ್ ಗಳಿಗೆ ಅಳವಡಿಸುತಿದ್ದ ಕೇಬಲ್ ಗಳನ್ನು ಕದ್ದು ಮಾರುತಿದ್ದ ಆರೋಪಿಗಳು ಅರಸಾಳು ಗ್ರಾಮದಲ್ಲಿ ಸುತ್ತಾಡುತ್ತಿದ್ದ ಕುರಿತು ಬಂದ ಗುಪ್ತ ಮಾಹಿತಿಯ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಳವು ಸಂಬಂಧ ಪಟ್ಟ ಕೇಬಲ್ ಸಾಮಗ್ರಿಗಳನ್ನು ಕೂಡ ಪೊಲೀಸರು ಜಪ್ತಿ ಮಾಡಿದ್ದಾರೆ.ಆರೋಪಿಗಳನ್ನು ನ್ಯಾಯಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ ಕೊರವರ , ರಾಮಚಂದ್ರ , ಪರಮೇಶ್ವರಪ್ಪ ಹಾಗೂ ಅವಿನಾಶ್ ಇದ್ದರು.
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…