ಬಿಸ್ಕೆಟ್ ಪ್ಯಾಕ್ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ
ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್ಗಳಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ.
ಭದ್ರಾವತಿ ನಗರದ ನಿವಾಸಿಗಳಾದ ರಾಹಿಲ್ (19) ಹಾಗೂ ತಸೀರುಲ್ಲಾ (19) ಬಂಧಿತ ಆರೋಪಿಗಳಾಗಿದ್ದಾರೆ.
ಸಂಜೆ 4.30ರ ಸುಮಾರಿಗೆ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಆಗಮಿಸಿದ್ದ ಈ ಇಬ್ಬರು ಯುವಕರು ಮೂರು ವೀಟಾ ಮಾರಿ ಗೋಲ್ಡ್ ಬಿಸ್ಕೆಟ್ ಪ್ಯಾಕೆಟ್ಗಳನ್ನು ತಂದಿದ್ದರು. ಅನುಮಾನಗೊಂಡ ಜೈಲು ಸಿಬ್ಬಂದಿ ಬಿಸ್ಕೆಟ್ ಪ್ಯಾಕೆಟ್ಗಳನ್ನು ಪರಿಶೀಲಿಸಿದಾಗ, ಕಪ್ಪು ಗಮ್ ಟೇಪ್ನಲ್ಲಿ ಸುತ್ತಿದ ನಿಷಿದ್ಧ ವಸ್ತುಗಳು ಪತ್ತೆಯಾದವು. ತಪಾಸಣೆ ಮಾಡಿದಾಗ ಅವುಗಳಲ್ಲಿ 1 ಗಾಂಜಾ ಪ್ಯಾಕೆಟ್ ಮತ್ತು 2 ಸಿಗರೇಟ್ ಪ್ಯಾಕೆಟ್ಗಳು ಇರುವುದು ದೃಢಪಟ್ಟಿತು.
ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ ಜೈಲು ಸಿಬ್ಬಂದಿ ಆರೋಪಿಗಳನ್ನು ತುಂಗಾ ನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಕೇಂದ್ರ ಜೈಲು ಅಧೀಕ್ಷಕ ಡಾ. ರಂಗನಾಥ್ ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಬಂಧಿತ ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಬಿಸ್ಕೆಟ್ ಪ್ಯಾಕೆಟ್ನಲ್ಲಿದ್ದ ನಿಷೇಧಿತ ವಸ್ತುಗಳನ್ನು ಪತ್ತೆ ಮಾಡುವಲ್ಲಿ ಜೈಲು ಸಿಬ್ಬಂದಿ ಚಾಣಾಕ್ಷತೆ ಮೆರೆದಿದ್ದಾರೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…