ಫೇಸ್ಬುಕ್ ವೀಡಿಯೋ ವಿವಾದ – ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಪ್ರತ್ಯೇಕ ಎರಡು ದರೋಡೆ ಪ್ರಕರಣ

ಫೇಸ್ಬುಕ್ ವೀಡಿಯೋ ವಿವಾದ -ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಎರಡು ಪ್ರತ್ಯೇಕ ದರೋಡೆ ಪ್ರಕರಣ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣವಾದ ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ ಒಂದು ವೀಡಿಯೋಗೆ ಸಂಬಂಧಿಸಿದಂತೆ ಉಂಟಾದ ಗಲಾಟೆಯು ಎರಡು ಪ್ರತ್ಯೇಕ ದರೋಡೆ ಪ್ರಕರಣ ದಾಖಲಾಗುವ ಮೂಲಕ ಅಂತ್ಯಗೊಂಡಿರುವ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಆಚಾರ್ಯ ಎಂಬುವವರು ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ದ ಬಿಎನ್ ಎಸ್ 309(6) ಅಡಿಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು , ಇನ್ನೊಂದು ಪ್ರಕರಣದಲ್ಲಿ ಪಟ್ಟಣದ ನಿವಾಸಿ ಲೇಖನಾ ಚಂದ್ರನಾಯ್ಕ್ ನೀಡಿದ ದೂರಿನ ಮೇರೆಗೆ BNS 309(6) ಕಾಯ್ದೆ ಅಡಿಯಲ್ಲಿ ಮತ್ತೊಂದು ಮತ್ತೊಂದು ದರೋಡೆ ಪ್ರಕರಣ ದಾಖಲಾಗಿದೆ.

ಶ್ವೇತಾ ಆಚಾರ್ಯ ನೀಡಿರುವ ದೂರಿನಲ್ಲೇನಿದೆ..!!??

ಶಿವಮೊಗ್ಗ ರಸ್ತೆಯಲ್ಲಿರುವ ಶ್ವೇತಾಶ್ರೀ ಗಾರ್ಮೆಂಟ್ಸ್ ಮತ್ತು ಬ್ಯೂಟಿ ಪಾರ್ಲರ್ ಗೆ ತೆರಳಿದಾಗ ಶುಕ್ರವಾರ ಮಧ್ಯಾಹ್ನ ನಾನು ಊಟಕ್ಕೆ ತೆರಳಿದ್ದಾಗ ಪಟ್ಟಣದ ನಿವಾಸಿಗಳಾದ ಲೇಖನಾ ಚಂದ್ರನಾಯ್ಕ್ , ಶಶಿಕಲಾ ಸುರೇಶ್ , ಸೀಮಾ ಸೆರವೋ ಹಾಗೂ ಚಂದ್ರನಾಯ್ಕ್ ಏಕಾಏಕಿ ದೊಣ್ಣೆಗಳೊಂದಿಗೆ ನುಗ್ಗಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಅಂಗಡಿಯಲ್ಲಿದ್ದ 37 ಗ್ರಾಂ ತೂಕದ ಮಾಂಗಲ್ಯಸರ , 6ಗ್ರಾಂ ಸರ , 5ಗ್ರಾಂ ಉಂಗುರ ಹಾಗೂ 3 ಗ್ರಾಂ ಓಲೆಯನ್ನು ಸಿಬ್ಬಂದಿಗಳಿಗೆ ಹೆದರಿಸಿ ಕಿತ್ತುಕೊಂಡು ಹೋಗಿದ್ದಾರೆ ಎಂದು ಶ್ವೇತಾ ಎಂಬುವವರು ದೂರು ಸಲ್ಲಿಸಿದ್ದಾರೆ.

ಲೇಖನ ಚಂದ್ರನಾಯ್ಕ್ ದೂರಿನಲ್ಲೇನಿದೆ..!!??

ಸಾಮಾಜಿಕ ಜಾಲತಾಣ ಪೇಸ್ಬುಕ್ ನಲ್ಲಿ ಪಟ್ಟಣದ ಶ್ವೇತಾ ಆಚಾರ್ಯ ಎಂಬುವವರು ಗುರುವಾರ ರಾತ್ರಿ 9 ಗಂಟೆಗೆ ಪೇಸ್ಬುಕ್ ಲೈವ್ ಬಂದು ತನ್ನ ಹಾಗೂ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಪ್ರಶ್ನಿಸಲು ಶುಕ್ರವಾರ ಮಧ್ಯಾಹ್ನ ಶಿವಮೊಗ್ಗ ರಸ್ತೆಯಲ್ಲಿರುವ ಶ್ವೇತಾ ರವರ ಬ್ಯೂಟಿ ಪಾರ್ಲರ್ ಗೆ ಹೋದಾಗ ಶ್ವೇತಾ , ತೇಜಸ್ , ಅಂಜನ್ ಕುಮಾರ್ ಹಾಗೂ ಕಾವ್ಯ ಎಂಬುವವರು ಏಕಾಏಕಿ ನಮ್ಮ ಮೇಲೆ ಹಲ್ಲೆ ನಡೆಸಲು ಮುಂದಾಗಿ ಕೆಳಗೆ ಬೀಳಿಸಿದ್ದು ಈ ಸಂಧರ್ಭದಲ್ಲಿ 42 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಅದನ್ನು ಅಲ್ಲಿದ್ದ ಅಂಜನ್ ಕುಮಾರ್ ಎಂಬುವವರು ತೆಗೆದುಕೊಂಡಿದ್ದಾರೆ ಆನಂತರದಲ್ಲಿ ಮೇಲ್ಕಂಡ ನಾಲ್ವರು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ.

ಘಟನೆಯ ಹಿನ್ನಲೆ :

ರಿಪ್ಪನ್‌ಪೇಟೆ ಪಟ್ಟಣದ ಶ್ವೇತಾ ಆಚಾರ್ಯ ಎಂಬುವವರು ತಮ್ಮ ಪೇಸ್ಬುಕ್ ಖಾತೆಯಲ್ಲಿ ಲೈವ್ ಬಂದು ತಮ್ಮ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಪಟ್ಟಣದ ಲೇಖನ ಚಂದ್ರನಾಯ್ಕ್ , ಶಶಿಕಲಾ ಸುರೇಶ್ ಹಾಗೂ ಸೀಮಾ ಸೆರವೋ ಶುಕ್ರವಾರ ಮಧ್ಯಾಹ್ನ ದೂರು ಸಲ್ಲಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮುಂದುವರಿದ ಪ್ರಕರಣ ಎರಡು ಪ್ರತ್ಯೇಕ ದರೋಡೆ ಕೇಸ್ ದಾಖಲಿಸುವ ಹಂತಕ್ಕೆ ತಲುಪಿದೆ. ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸರು ತನಿಖೆ ಕೈಗೊಂಡಿದ್ದು ಸತ್ಯಾಂಶ ತನಿಖೆಯ ನಂತರ ಹೊರಬೀಳಬೇಕಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

4 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

6 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

7 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

1 day ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

1 day ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

1 day ago