ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ

ರಿಪ್ಪನ್‌ಪೇಟೆ;-ವ್ಯಕ್ತಿ ಜೀವಂತವಾಗಿದ್ದಾಗ ಮಾಡಿದ ಸಮಾಜಮುಖಿ  ಕಾರ್ಯಗಳ ಬಗ್ಗೆ ಜನ ಮಾತನಾಡುವುದಿಲ್ಲ. ಅದೇ ವ್ಯಕ್ತಿ ಮರಣ ಹೊಂದಿದಾಗ ಅವರು ಮಾಡಿದ ಸಾಮಾಜಿಕ ಸತ್ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂಬುದಕ್ಕೆ ಬೆಳಕೋಡು ಹಾಲಸ್ವಾಮಿಗೌಡರೇ ಸಾಕ್ಷಿಯಾಗಿದ್ದಾರೆಂದು ಶ್ರೀಶೈಲ ಜಗದ್ಗುರುಗಳು ಮತ್ತು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಹೇಳಿದರು.

ಇತ್ತೀಚೇಗೆ ನಿಧನರಾದ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜ ಭಾಂದವರು ಮತ್ತು ಕುಟುಂಬದವರು ಆಯೋಜಿಸಲಾದ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದೂರವಾಣಿಯಲ್ಲಿ ತಮ್ಮ ಅಶೀರ್ವಚನ ನೀಡಿ ಹಾಲಸ್ವಾಮಿಗೌಡರು ಸಮಾಜಕ್ಕೆ ದೊಡ್ಡ ಅಸ್ತಿ ಅವರ  ಅಕಾಲಿಕ ನಿಧನದಿಂದ ವೀರಶೈವ ಸಮಾಜಕ್ಕೆ ತುಂಬಲಾರದಷ್ಟು ನಷ್ಟವಾಗಿದೆ.ಅವರ ಸೇವಾ ಕ್ಷೇತ್ರಗಳ ಬಗ್ಗೆ ಅವಲೋಕನ ಮಾಡಿದ ಉಭಯ ಜಗದ್ಗುರುಗಳು ಇಂದಿನ ಯುವ ಸಮೂಹ ಅವರ ಅದರ್ಶ ಗುಣಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳುವಂತೆ ತಿಳಿಸಿ ಇದೊಂದು ಸಮಾಜದ ಅನರ್ಘ್ಯ ರತ್ನ ಮೇರು ಪರ್ವತವಿದ್ದಂತೆ ಎಂದು ಹೇಳಿದರು.

ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ ಮತ್ತು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ದಿವ್ಯಸಾನಿಧ್ಯವಹಿಸಿ ಅಶೀರ್ವಚನ ನೀಡಿ ಜಾತಿಯ ಸಂಕೋಲೆಯಾಗಿ ಸಮಾಜದ ಸಂಘಟನೆಯೊAದಿಗೆ ಕಷ್ಟ ನಷ್ಟದಲ್ಲಿರುವವರನ್ನು ಮೇಲ್ತುವ ಮೂಲಕ ಮಠ ಮಂದಿರಗಳಿಗೆ ಸದಾ ತನುಮನ ಧನವನ್ನು ನೀಡುವ ಮೂಲಕ ಸಮಾಜ ಮುಖಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಮರೆಯಲಾರದ ಮಾಣಿಕ್ಯವಾಗಿ ಇಂದಿನ ಯುವ ಜನಾಂಗಕ್ಕೆ ಸ್ಪೋರ್ತಿಯ ಚಿಲುಮೆಯಂತಾಗಿದ್ದಾರೆಂದರು.

ಭಾವಪೂರ್ಣ ಶ್ರದ್ದಾಂಜಲಿ ಸಭೆಯಲ್ಲಿ ವೀರಶೈವ ಸಮಾಜದ ಉಪಾಧ್ಯಕ್ಷ ಜಿ.ಎಂ.ದುಂಡರಾಜ್‌ಗೌಡರು, ಜಿಲ್ಲಾ ಬಿಜೆಪಿ ಮುಖಂಡ ಟಿ.ಡಿ.ಮೇಘರಾಜ್, ಅಕ್ಷಯಸಾಗರ ಸೌಹಾರ್ಧ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಜಿ.ದಿನೇಶ ಬರದವಳ್ಳಿ,  ಕೋಣಂದೂರು ಉದ್ಯಮಿ ಕೆ.ಆರ್.ಪ್ರಕಾಶ್,ನ್ಯಾಯವಾದಿ ಎಂ.ಎನ್.ದಿನೇಶ,ಖೈರಾ ಕೆ.ಆರ್.ರಾಜು, ಗ್ರಾಮ ಪಂಚಾಯಿತ್ ಸದಸ್ಯ ಡಿ.ಈ.ಮಧುಸೂಧನ್, ರಶ್ಮಿ,ವಿನುತಾ ಇನ್ನಿತರರು ನುಡಿನಮನ ಸಲ್ಲಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

6 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

23 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

1 day ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

1 day ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

1 day ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

1 day ago