ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ

ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ

ರಿಪ್ಪನ್‌ಪೇಟೆ: ಜನರ ಮತ ಕದ್ದುಕೊಂಡು ಅಧಿಕಾರದ ಕುರ್ಚಿ ಹಿಡಿದವರು ಪ್ರಜಾಪ್ರಭುತ್ವದ ಆತ್ಮವನ್ನೇ ಹತ್ತಿಕ್ಕಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ತೀವ್ರವಾಗಿ ಆರೋಪಿಸಿದ್ದಾರೆ.

ಸೋಮವಾರ ಸಂಜೆ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ನಲ್ಲಿ ನಡೆದ “ವೋಟ್ ಚೋರ್, ಗದ್ದಿ ಚೋಡ್” ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದ ಅವರು, “ಮತ ಕಳವು ಪ್ರಜಾಪ್ರಭುತ್ವದ ವಿರುದ್ಧದ ಗಂಭೀರ ಅಪರಾಧ. ಜನರ ಆಶಯಗಳ ವಿರುದ್ಧ ನಡೆದ ಈ ರಾಜಕೀಯ ದ್ರೋಹವನ್ನು ಕಾಂಗ್ರೆಸ್ ಪಕ್ಷ ಜನಶಕ್ತಿ ಮೂಲಕ ಎದುರಿಸುತ್ತಿದೆ,” ಎಂದರು.

“ಜನರ ಪವಿತ್ರ ಮತವನ್ನು ಕದ್ದುಕೊಂಡು ಅಧಿಕಾರದಲ್ಲಿರುವುದು ಪ್ರಜಾಪ್ರಭುತ್ವದ ಮೇಲಿನ ದೊಡ್ಡ ಅಪರಾಧ. ಈ ಕಳಂಕದ ವಿರುದ್ಧ ಕಾಂಗ್ರೆಸ್ ಪಕ್ಷ ಜನಶಕ್ತಿ ಬಳಸಿ ಹೋರಾಟ ಆರಂಭಿಸಿದೆ. ಮತದ ಗೌರವ ಕಾಪಾಡುವ ಹೋರಾಟದಲ್ಲಿ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕು,” ಎಂದು ಕರೆ ನೀಡಿದರು.

ಅವರು ಮುಂದುವರೆದು, “ಸತ್ಯವನ್ನು ಮುಚ್ಚಿಹಾಕಲು ಯತ್ನಿಸುವ ಆಡಳಿತದ ವಿರುದ್ಧ ಜನರ ಕೋಪ ತಪ್ಪದೇ ಸ್ಫೋಟಿಸುತ್ತದೆ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವದ ಪರವಾಗಿ ಹಾಗೂ ಸತ್ಯದ ಪರವಾಗಿ ಹೋರಾಟ ಮುಂದುವರಿಸುತ್ತದೆ. ಮತ ಕದ್ದುಕೊಂಡು ಗದ್ದಿಗೆ ಕೂತವರು ಜನರ ನ್ಯಾಯಾಲಯದಲ್ಲಿ ತಪ್ಪಿತಸ್ಥರಾಗುವುದು ಖಚಿತ,” ಎಂದು ಹೇಳಿದರು.

ಈ ಅಭಿಯಾನವನ್ನು ಶಾಸಕ ಹಾಗೂ ಕರ್ನಾಟಕ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ಪಿ. ರಾಮಚಂದ್ರ, ಬಗುರುಹುಕುಂ ಸಮಿತಿ ಅಧ್ಯಕ್ಷೆ ಸಾಕಮ್ಮ ,ಕೆಡಿಪಿ ಸದಸ್ಯ ಆಸೀಫ಼್ ಭಾಷಾ , ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪಗೌಡ ಹಾರೋಹಿತ್ತಲು, ಉಬೇದುಲ್ಲಾ ಷರೀಫ್ , ಧನಲಕ್ಷ್ಮಿ ಗಂಗಾಧರ್, ಡಿ.ಇ. ಮಧುಸೂದನ್,ಗಣಪತಿ , ನಿರೂಪ್ ಕುಮಾರ್, ನಿರುಪಮಾ,ಸಾರಾಭಿ , ಉಮಾಕರ್ ಕಾನುಗೋಡು , ಪ್ರಕಾಶ್ ಪಾಲೇಕರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಪಕ್ಷದ ಅಭಿಮಾನಿಗಳು ಭಾಗವಹಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

40 minutes ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

18 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

18 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

20 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago