ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ
ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ಎಚ್ಚರಿಕೆ
ರಿಪ್ಪನ್ಪೇಟೆ : ಮಾಜಿ ಸಚಿವ ಸಿ.ಟಿ. ರವಿ ರವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿದ ಆರೋಪದ ಹಿನ್ನೆಲೆ, ರಿಪ್ಪನ್ಪೇಟೆ ಸವಿತಾ ಸಮಾಜ ಘಟಕದಿಂದ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ.
ಸಮಾಜದ ಸದಸ್ಯರು ನಾಡ ಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಸಿ.ಟಿ. ರವಿರವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮಾಜದ ಬಾಂಧವರು ಉಗ್ರ ಪ್ರತಿಭಟನೆಗೆ ಇಳಿಯುವ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗೆ ನಡೆದ ಮಾತುಕತೆಯ ವೇಳೆ ಸಿ.ಟಿ. ರವಿರವರು ಸವಿತಾ ಸಮಾಜದ ಬಾಂಧವರ ಕುರಿತು ನಿಷೇಧಿತ ಪದ ಬಳಕೆ ಮಾಡಿದಂತಿದೆ ಎಂದು ಸಮಾಜದವರು ಆರೋಪಿಸಿದ್ದಾರೆ. “ಒಂದು ಜನಾಂಗವನ್ನು ಉದ್ದೇಶಿಸಿ ಈ ರೀತಿಯಾಗಿ ಮಾತನಾಡಿರುವುದು ಸಿ.ಟಿ. ರವಿ ಅವರ ಘನತೆಗೆ ಶೋಭೆತರುವಂತದ್ದಲ್ಲ,” ಎಂದು ಸಮಾಜದ ಪ್ರತಿನಿಧಿಗಳು ಹೇಳಿದ್ದಾರೆ.
“ಅವರು ತಕ್ಷಣವೇ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಬೃಹತ್ ಮಟ್ಟದ ಪ್ರತಿಭಟನೆಗಳನ್ನು ನಡೆಸುವಂತಾಗುತ್ತದೆ,” ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ರಿಪ್ಪನ್ಪೇಟೆ ಸವಿತಾ ಸಮಾಜದ ಅಧ್ಯಕ್ಷರಾದ ಸಿದ್ದೇಶ್ ಭಂಡಾರಿ ಕಾರ್ಯದರ್ಶಿ ಸುನೀಲ್ಕುಮಾರ್ ವೈ ಎಸ್ ,ಪದಾಧಿಕಾರಿಗಳಾದ ಕೆ ಎನ್ ಮಂಜುನಾಥ್ , ಬಾಲರಾಜ್ , ರಾಜೇಶ್ , ಅರುಣ , ವಾಸು , ಸತೀಶ್ ,ಚಿರಂತ್ , ಪಾಂಡುರಂಗ , ಮಂಜುನಾಥ್ ಬೈರಾಪುರ ಹಾಗೂ ಇನ್ನಿತರರು ಇದ್ದರು.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…