ರಿಪ್ಪನ್ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ
ಬೆಂಗಳೂರು: 2025–26ನೇ ಸಾಲಿನ ರಾಜ್ಯಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ರಿಪ್ಪನ್ಪೇಟೆಯ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ದಿಟ್ಟ ಪ್ರದರ್ಶನ ನೀಡಿದ್ದು, ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಈ ಸ್ಪರ್ಧೆಯಲ್ಲಿ ಮಿಂಚಿದ ಐದು ಪ್ರತಿಭಾವಂತ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಅಪರೂಪದ ಸಾಧನೆ ಮಾಡಿದ್ದಾರೆ.
ಆಯ್ಕೆಯಾದ ಕ್ರೀಡಾಪಟುಗಳು:
1. ಶ್ರೇಯಾ ಬಿ.ಆರ್ — 10ನೇ ತರಗತಿ
2. ಸೋನಾಲಿ — 8ನೇ ತರಗತಿ
3. ಮಾನಸ — 8ನೇ ತರಗತಿ
4. ಕೀರ್ತಿ — 8ನೇ ತರಗತಿ
5. ಆಯುಶ್ರೀ — 7ನೇ ತರಗತಿ
ಈ ಎಲ್ಲ ವಿದ್ಯಾರ್ಥಿನಿಯರು ಮುಂದಿನ ದಿನಗಳಲ್ಲಿ ಹರಿಯಾಣ ಮತ್ತು ಆಂಧ್ರಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದಾರೆ.
ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರ ವರ್ಗ, ಪೋಷಕರು ಹಾಗೂ ರಿಪ್ಪನ್ ಪೇಟೆಯ ಎಲ್ಲಾ ಕ್ರೀಡಾಭಿಮಾನಿಗಳು ಹಾರ್ದಿಕ ಅಭಿನಂದನೆಗಳನ್ನು ತಿಳಿಸಿದ್ದಾರೆ.ಈ ಸಾಧನೆ ಗ್ರಾಮ–ಪಟ್ಟಣಕ್ಕೆ ಹೆಮ್ಮೆಯ ಸಂಭ್ರಮ ತಂದಿದ್ದು, ಮುಂಬರುವ ರಾಷ್ಟ್ರಮಟ್ಟದ ಪಂದ್ಯಗಳಲ್ಲಿ ಕೂಡ ಇದೇ ರೀತಿ ಕೀರ್ತಿಯನ್ನು ಗಳಿಸಲಿ ಎಂಬುದು ಎಲ್ಲರ ಹಾರೈಕೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್