ರಿಪ್ಪನ್ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು
ರಿಪ್ಪನ್ಪೇಟೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಕನ್ನಡ ತಾಯಿ ಭುವನೇಶ್ವರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಪಟ್ಟಣದ ಪಿಎಸ್ಐ ರಾಜುರೆಡ್ಡಿ ಚಾಲನೆ ನೀಡಿದರು. ನೂರಾರು ಪುಟಾಣಿ ಮಕ್ಕಳು ಭುವನೇಶ್ವರಿ ವೇಷದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಜನರ ಮನಸೆಳೆದರು. ಡೊಳ್ಳು ಕುಣಿತ, ಪಟಾಕಿ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು. “ಜೈ ಕನ್ನಡ ಮಾತೆ” ಘೋಷಣೆಗಳೊಂದಿಗೆ ಪಟ್ಟಣದ ಬೀದಿಗಳು ಕನ್ನಡದ ಬಣ್ಣದಲ್ಲಿ ಮಿಂದಳಿದವು.
ಕನ್ನಡ ಬಾವುಟಗಳ ಅಲಂಕಾರದಿಂದ ಸಂಪೂರ್ಣ ರಿಪ್ಪನ್ಪೇಟೆ ಚೈತನ್ಯದಿಂದ ಹೊಳೆಯಿತು. ವಿದ್ಯಾರ್ಥಿಗಳಿಂದ ಕನ್ನಡ ನುಡಿಗಟ್ಟುಗಳ ಪಥಸಂಚಲನ, ಹಾಗೂ ಜಾನಪದ ಕಲಾವಿದರಿಂದ ಜಾನಪದ ಕಲಾ ಮೆರವಣಿಗೆ ನಡೆದಿತು. ಮೆರವಣಿಗೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಗಮನಾರ್ಹವಾಗಿತ್ತು. ಶಾಸಕ ಬೇಳೂರು ಗೋಪಾಲಕೃಷ್ಣ ಮೆರವಣಿಗೆಯಲ್ಲಿ ಪಾಲ್ಗೊಂಡು ಡೊಳ್ಳು ಕುಣಿತಕ್ಕೆ ಹೆಜ್ಜೆ ಹಾಕುತ್ತಾ ಮೆರವಣಿಗೆಯಲ್ಲಿ ಸಾಗಿದ್ದು ಕನ್ನಡ ಅಭಿಮಾನಿಗಳಲ್ಲಿ ಹುಮ್ಮಸು ಮೂಡಿಸಿತು.
ಈ ಸಂಧರ್ಭದಲ್ಲಿ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ,ವಿವಿಧ ಪಕ್ಷಗಳ ಮುಖಂಡರು , ಸಾರ್ವಜನಿಕರು , ಕನ್ನಡ ಅಭಿಮಾನಿಗಳು ಇದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…