ಯುರೋಪಿನಲ್ಲಿ ” ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆಯ ಅಜೀತ್ ಪ್ರಭು
ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಗ್ರಾಮದ ಅಜೀತ್ ಪ್ರಭು ಅವರಿಗೆ ಯುರೋಪಿನ ನೆದರ್ಲಾಂಡ್ಸ್ ದೇಶದ ಐಂದೊವನ್ ನಗರದ ಶ್ರೀಗಂಧ ಹಾಲ್ಯಾಂಡ್ ಕನ್ನಡ ಬಳಗವು ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಯುರೋಪಿನಾದ್ಯಂತ ಕನ್ನಡ ಕಲೆ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಕನ್ನಡಿಗರನ್ನು ಗುರುತಿಸಿ ಶ್ರೀಗಂಧ ರತ್ನ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
2025 ರಲ್ಲಿ ಈ ಗೌರವವನ್ನು ಯಕ್ಷಗಾನ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆಯನ್ನ ಸಲ್ಲಿಸುತ್ತಿರುವ ಶ್ರೀ ಅಜೀತ್ ಪ್ರಭು ತಲ್ಲೂರು ಅವರನ್ನ ಗುರುತಿಸಿ ನೀಡಲಾಗಿದೆ.
ಅಜೀತ್ ಪ್ರಭು ಮಾಸ್ತಿಕಟ್ಟೆ ಅವರು 2017 ರಿಂದ ಜರ್ಮನಿಯ ಫ್ರ್ಯಾಂಕ್ಫರ್ಟ್ ನಗರದಲ್ಲಿ ನೆಲೆಯಾಗಿದ್ದು. ವೃತ್ತಿಯಲ್ಲಿ ಜರ್ಮನಿಯ ಪ್ರತಿಷ್ಟಿತ ಬ್ಯಾಂಕ್ ಒಂದರಲ್ಲಿ ಸೀನಿಯರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗೆ ವೃತ್ತಿ ಜೀವನದ ಬಿಡುವಿನ ಸಮಯದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಯುರೋಪಿನ ವಿವಿಧ ದೇಶಗಳಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಕಲೆಯ ಪ್ರಚಾರ–ಪ್ರಸಾರದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ತಮ್ಮ ಬಿಡುವಿನ ಸಮಯದಲ್ಲಿ 20 ಕ್ಕೂ ಹೆಚ್ಚು ಯಕ್ಷಗಾನ ಆಸಕ್ತರಿಗೆ ಶಾಸ್ತ್ರೀಯವಾಗಿ ಯಕ್ಷಗಾನವನ್ನು ಕಲಿಸಿ ವಿದೇಶದಲ್ಲೂ ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಅವರ ಈ ಕಾರ್ಯಕ್ಕೆ ಹೊಸನಗರ ತಾಲೂಕಿನ ಯಕ್ಷಗಾನ ಕಲಾ ಪ್ರಿಯರು ಅಭಿನಂದಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್