Headlines

SHIVAMOGGA | ‘ಅಕ್ಕ ಪಡೆ’ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ

ರಿಪ್ಪನ್ ಪೇಟೆಯಲ್ಲಿ ಸೂರತ್ ಸ್ಯಾರಿ ಡಿಸ್ಕೌಂಟ್ ಮೇಳ - ಭರ್ಜರಿ ಡಿಸ್ಕೌಂಟ್ , 150 ರೂ ಮಾತ್ರ | soorath sarry
ರಿಪ್ಪನ್ ಪೇಟೆಯಲ್ಲಿ ಸೂರತ್ ಸ್ಯಾರಿ ಡಿಸ್ಕೌಂಟ್ ಮೇಳ – ಭರ್ಜರಿ ಡಿಸ್ಕೌಂಟ್ , 150 ರೂ ಮಾತ್ರ | soorath sarry discount
ಸ್ಥಳ – ಶ್ರೀ ರಾಮಮಂದಿರ ,ಬಿಎಸ್ ಎನ್ ಎಲ್ ಕಛೇರಿ‌ಮುಂಭಾಗ ರಿಪ್ಪನ್ ಪೇಟೆ

SHIVAMOGGA | ಅಕ್ಕ ಪಡೆ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ತಂಡ ರಚನೆ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಈ ತಂಡಕ್ಕೆ ಎನ್ ಸಿ ಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿನವರಾಗಿದ್ದು, ದೈಹಿಕ ಸದೃಢತೆ ಮತ್ತು ಸ್ಥಳೀಯ ನಿವಾಸಿ ಯಾಗಿರಬೇಕು. ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ 2 ಪಾಳಿ ಆಧಾರದಲ್ಲಿ ಕೆಲಸ ನಿರ್ವಹಿಸಲು ಬದ್ಧರಿರಬೇಕು.

ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ ಶಿವಮೊಗ್ಗ ಇವರಿಗೆ ದಿನಾಂಕ:13.11.2025 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-295514 ಅಥವಾ  ddwcdshimoga@gmail.com ಸಂಪರ್ಕಿಸಬಹುದಾಗಿದೆ ಎಂದು ಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ‌ ಬಣಕಾರ್ ತಿಳಿಸಿದ್ದಾರೆ.

ಏನಿದು ಅಕ್ಕ ಪಡೆ ಯೋಜನೆ?

“ಅಕ್ಕ ಪಡೆ” ಎಂಬುದು ಮಹಿಳೆಯರು ಮತ್ತು ಮಕ್ಕಳ ಮೇಲಿನ ಹಿಂಸಾಚಾರವನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ಪ್ರಾರಂಭಿಸಿದ ಹೊಸ ಮಹಿಳಾ ಸುರಕ್ಷತೆ ಮತ್ತು ರಕ್ಷಣಾ ಪಡೆಯಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಈ ಉಪಕ್ರಮವು ಪೊಲೀಸ್ ಸಿಬ್ಬಂದಿ ಮತ್ತು ತರಬೇತಿ ಪಡೆದ ಎನ್‌ಎಸ್‌ಸಿ ಕೆಡೆಟ್‌ಗಳ ತಂಡಗಳನ್ನು ಒಳಗೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗುತ್ತದೆ. ಇಂದಿರಾ ಗಾಂಧಿಯವರ ಪುಣ್ಯತಿಥಿಯ ಅಂಗವಾಗಿ 2025ರ ನವೆಂಬರ್ 19ರಂದು ಈ ಪಡೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಇದು ಬೀದರ್ ಜಿಲ್ಲೆಯಲ್ಲಿ ಯಶಸ್ವಿ ಪ್ರಾಯೋಗಿಕವಾಗಿ ಜಾರಿಯಾದ ಈ ಯೋಜನೆಯನ್ನು ರಾಜ್ಯವ್ಯಾಪಿ ವಿಸ್ತರಣೆ ಮಾಡಲಾಗುತ್ತಿದೆ.

‘ಅಕ್ಕ ಪಡೆ’ಯ ಪ್ರಮುಖ ಉದ್ದೇಶಗಳು

ಸಹಾನುಭೂತಿ, ಸೇವಾಭಾವನೆ ಮತ್ತು ಸಮಾಜಮುಖಿ ಚಿಂತನೆ ಹೊಂದಿರುವ ಮಹಿಳೆಯರಿಗೆ ಒಂದು ವೇದಿಕೆ ಕಲ್ಪಿಸುವುದು. ಸಮಾಜದಲ್ಲಿ ಸುರಕ್ಷತೆ ಮತ್ತು ಶಿಕ್ಷಣದ ಕಿರು ಸೇತುವಾಗಿ, ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇಡುವುದು ಯೋಜನೆ ಹಿಂದಿನ ಉದ್ದೇಶವಾಗಿದೆ.

ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ದೌರ್ಜನ್ಯವನ್ನು ತಡೆಗಟ್ಟುವುದು.

ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವುದು.

ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ಬೆಂಬಲ ನೀಡುವುದು.

ಯೋಜನೆಯ ಸ್ವರೂಪ ಮತ್ತು ಕಾರ್ಯವ್ಯಾಪ್ತಿ

ಈ “ಅಕ್ಕ ಪಡೆ”ಯು 2023 ರಲ್ಲಿ ಬೀದರ್ ಜಿಲ್ಲೆಯಲ್ಲಿ ಪ್ರಾಯೋಗಿಕ ಯೋಜನೆಯಾಗಿ ಪ್ರಾರಂಭಗೊಂಡು, ತ್ವರಿತ ಪ್ರತಿಕ್ರಿಯೆ ಮತ್ತು ಗೋಚರ ಸಾರ್ವಜನಿಕ ಉಪಸ್ಥಿತಿಗಾಗಿ ಬಲವಾದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಗಳಿಸಿದ ನಂತರ ಈಗ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಈ ಪಡೆಗಳು ಬಸ್ ನಿಲ್ದಾಣಗಳು, ಶಾಲೆಗಳು, ಕಾಲೇಜುಗಳು, ಮಾರುಕಟ್ಟೆಗಳು, ಉದ್ಯಾನವನಗಳು ಮತ್ತು ದೇವಾಲಯಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗಲಿವೆ. ಕಾರ್ಯಾಚರಣೆಗಾಗಿ ಹೊಯ್ಸಳ ವಾಹನಗಳ ಮಾದರಿಯಲ್ಲಿ ಮಾರ್ಪಾಡು ಮಾಡಿದ ವಾಹನಗಳನ್ನು ಬಳಸಲಾಗುತ್ತದೆ. ಪ್ರತಿ ಘಟಕವು ಆರು ರಿಂದ ಹತ್ತು ಸದಸ್ಯರನ್ನು ಒಳಗೊಂಡಿದ್ದು, ಇದರಲ್ಲಿ ಕನಿಷ್ಠ ಇಬ್ಬರು ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್‌ಗಳು ಮತ್ತು ತರಬೇತಿ ಪಡೆದ ಎನ್‌ಸಿಸಿ ಕೆಡೆಟ್‌ಗಳು ಇರುತ್ತಾರೆ. ಅಕ್ಕ ಪಡೆ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸುತ್ತದೆ.

ತುರ್ತು ಸ್ಪಂದನೆ ಮತ್ತು ಜಾಗೃತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡುವ ಮಾಹಿತಿಯಂತೆ, ಐದು ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರಿಗೆ ಹಲವು ಸೌಲಭ್ಯಗಳನ್ನು ವಿಸ್ತರಿಸಿರುವ ಸರ್ಕಾರ ಅವರ ಸುರಕ್ಷತೆಗೆ ಅಗ್ರ ಆದ್ಯತೆ ನೀಡುತ್ತಿದೆ. ಯೋಜನೆಯಡಿ ಮಹಿಳೆಯರಿಗಾಗಿ ಈ ಕೆಳಕಂಡ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಸಹಾಯವಾಣಿ: ಅಕ್ಕ ಪಡೆಯು ರಾಜ್ಯಾದ್ಯಂತ ಇರುವ ಸಹಾಯವಾಣಿಯ ಮೂಲಕ ತಲುಪಲು ಲಭ್ಯವಿರುತ್ತದೆ. ದೂರದ ಸ್ಥಳದಿಂದ ಕರೆ ಬಂದರೂ ತಕ್ಷಣದ ಸಹಾಯವನ್ನು ಒದಗಿಸಲಾಗುತ್ತದೆ.

ತ್ವರಿತ ಕ್ರಮ: ತಂಡವು ದೂರುಗಳಿಗೆ ತ್ವರಿತವಾಗಿ ಪ್ರತಿಕ್ರಿಯಿಸಲಿದ್ದು, ಗಂಭೀರ ಪ್ರಕರಣಗಳಲ್ಲಿ ಆರೋಪಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುತ್ತದೆ.

ವಿಶೇಷ ತರಬೇತಿ: ಪಡೆಯ ಸದಸ್ಯರಿಗೆ ಹಿಂಸಾಚಾರ ಪ್ರಕರಣಗಳ ನಿರ್ವಹಣೆ ಮತ್ತು ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವುದು ಸೇರಿದಂತೆ ವಿಶೇಷ ತರಬೇತಿ ನೀಡಲಾಗುತ್ತದೆ.

ಜಾಗೃತಿ ಕಾರ್ಯಕ್ರಮಗಳು: ವಿದ್ಯಾರ್ಥಿಗಳು ಮತ್ತು ಮಹಿಳೆಯರಲ್ಲಿ ಬಾಲ್ಯ ವಿವಾಹ ನಿಷೇಧ, ಪೋಸ್ಕೋ ಕಾಯಿದೆ, ಮಹಿಳಾ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಲಾಗುವುದು. ಅಲ್ಲದೆ, 1098, 112, ಮತ್ತು 1930 ರಂತಹ ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ಹಂತ ಹಂತದ ವಿಸ್ತರಣೆ ಮತ್ತು ಅನುದಾನ

ನವೆಂಬರ್ 19, 2025 ರಂದು ರಾಜ್ಯದಲ್ಲಿನ 31 ಜಿಲ್ಲೆಗಳಲ್ಲಿ ರಾಜ್ಯಾದ್ಯಂತ ಈ ಯೋಜನೆಯನ್ನು ಜಾರಿಗೊಳಿಸಲು ನಿಗದಿಪಡಿಸಲಾಗಿದೆ.

ಮೊದಲ ಹಂತದಲ್ಲಿ ಉಡುಪಿ, ಮೈಸೂರು, ಮಂಗಳೂರು, ಬೆಳಗಾವಿ, ಬೆಂಗಳೂರು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಅಕ್ಕ ಪಡೆ ಕಾರ್ಯಾಚರಣೆ ಆರಂಭಿಸಲಿದೆ.

ಈ ಉಪಕ್ರಮಕ್ಕಾಗಿ ರಾಜ್ಯ ಸರ್ಕಾರದಿಂದ 110 ಕೋಟಿ ರೂ. ಅನುದಾನಕ್ಕೆ ಮನವಿ ಮಾಡಲಾಗಿದೆ. ಆರಂಭದಲ್ಲಿ 10-15 ಕೋಟಿ ರೂ. ಮಂಜೂರಾಗುವ ಸಾಧ್ಯತೆಯಿದೆ.
ನಿರ್ಭಯಾ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದಿಂದಲೂ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಾಕಾಂಕ್ಷೆಯ “ಅಕ್ಕ ಪಡೆ” ಯೋಜನೆಯಡಿ ಇದೀಗ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಉತ್ಸುಕರಾದ ಮಹಿಳೆಯರಿಗೆ ಹೊಸ ಅವಕಾಶ ಲಭ್ಯವಾಗಿದೆ. ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ಹಾಗೂ ನೆರವು ಒದಗಿಸುವ ಈ ಮಹತ್ವದ ಕಾರ್ಯದಲ್ಲಿ ಭಾಗಿಯಾಗಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Exit mobile version