ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಮನವಿ

ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್  ಮನವಿ

ಶಿವಮೊಗ್ಗ:  ಧರ್ಮಕ್ಕಿಂತ ಕಾನೂನೇ ಮುಖ್ಯ. ಶಾಂತಿಗಾಗಿ ಹೋರಾಟ ಮಾಡಬೇಕೆ ಹೊರತು ನಗರ ವಾಸಿಗಳ  ಮನವನ್ನು ಕದಡುವ ಕೆಲಸವನ್ನಲ್ಲ. ಆರ್ ಎಂಲ್ ನಗರದಲ್ಲಿ ನಡೆದ ಹಲ್ಲೆಯನ್ನು ಕೋಮುಬಣ್ಣಕ್ಕೆ ತಿರುಗಿಸಿ, ಊರಲ್ಲೆಲ್ಲ ಟಾಂ ಟಾಂ ಹೊಡೆದು  ಲಾಭ ಪಡೆಯಲು ಮುಂದಾದ ಶಾಸಕರು ಒಂದು ಕೋಮಿನ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ. ಹೀಗೆ ಮಾಡುವ ಮುನ್ನ ತಾಳ್ಮೆ ವಹಿಸಬೇಕಿತ್ತೆಂದು ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಹೇಳಿದ್ದಾರೆ.

ಶುಕ್ರವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರು ಬಸಪ್ಪ ನಗರದ ಮೇಲ್ಸೇತುವೆಯಲ್ಲಿ ಖಾಸಗಿ ಬಸ್ ಡಿಕ್ಕಿಯಾಗಿ ಒಬ್ಬ ಯುವಕ ಅಪಘಾತದಲ್ಲಿ ಸಾವನ್ನಪ್ಪಿದಾಗ ಯುವಕ ಬೇರೆ ಧರ್ಮಕ್ಕೆ ಸೇರಿದವನು ಎಂಬ ಒಂದೇ ಕಾರಣಕ್ಕೆ ಅವರ ಮನೆಗೆ ಹೋಗಿ ಸಾಂತ್ವನ ಹೇಳಲ್ಲ. ಗಾಯಗೊಂಡವರನ್ನು ವಿಚಾರಿಸಿಯೂ ಇಲ್ಲ. ಯಾಕೆ ಈ ಅಧರ್ಮ ಎಂದು ಪ್ರಶ್ನಿಸಿದರು.


ಶಾಸಕ ಚನ್ನಬಸಪ್ಪ ಅವರಿಗೆ ತಾಳ್ಮೆ, ಸಹನೆ ಕಡಿಮೆ ಇದೆ. ನಗರದಲ್ಲಿ ಯಾವುದೇ ರೀತಿಯ ಘಟನೆಯಾದರೂ ಯೋಚನೆ ಮಾಡದೇ ಅದನ್ನು ಕೋಮು ಬಣ್ಣಕ್ಕೆ ತಿರುಗಿಸಿಬಿಡುತ್ತಾರೆ. ಧರ್ಮದ ಲೇಪನ ಹಚ್ಚುತ್ತಾರೆ. ಇದಕ್ಕೆ ಹರೀಶ್ ಹಲ್ಲೆ ಗಲಾಟೆಯೇ ಇದಕ್ಕೆ ಸಾಕ್ಷಿ. ಈ ಹಲ್ಲೆಯನ್ನು ಒಂದು ಕೋಮಿನವರು ಮಾಡಿದ್ದಾರೆ ಪ್ರಚಾರ ಮಾಡಲಾಯಿತು. 

ಶಾಸಕ ಚನ್ನಬಸಪ್ಪ ಈ ಘಟನೆ ಹೇಗೆ ನಡೆಯಿತು, ಯಾರು ಮಾಡಿದ್ದಾರೆ ಎಂದು ಪೂರ್ವಾಪರ ವಿಚಾರಿಸದೆ ಪೂರ್ವಗ್ರಹಪೀಡಿತರಾಗಿ ಈ ಹಲ್ಲೆಯನ್ನು ಮುಸ್ಲಿಂ ಧರ್ಮದವರೇ ಮಾಡಿದ್ದಾರೆ ಎಂದು ಹರೀಶ್‌ನನ್ನೇ ಬಲವಂತವಾಗಿ ಪೊಲೀಸ್ ಠಾಣೆಗೆ ಕರೆಸಿ ಹೇಳಿಸಿದರು ಎಂದು ವಿವರಿಸಿದರು.
ನಿಜ ತಿಳಿದ ಮೇಲೆ ಘಟನೆಯನ್ನೇ ಬೇರೆ ಕಡೆಗೆ ತಿರುಗಿಸಿ ಗಾಂಜಾವನ್ನೇ ಪ್ರಮುಖವಾಗಿ ಬಿಂಬಿಸುತ್ತಿದ್ದಾರೆ.

ಶಾಸಕರಾದವರು ಧೈರ್ಯ ಹೇಳಬೇಕೇ ಹೊರತೂ ಇಲ್ಲಿರುವ ಹಿಂದೂಗಳು ಮುಸ್ಲೀಮರಿಂದಾಗಿ ಊರು ಬಿಟ್ಟು ಹೋಗುತ್ತಾರೆ ಎಂದು ಹೇಳಬಾರದು. ಯಾವ ಹಿಂದೂಗಳು ಶಿವಮೊಗ್ಗ ನಗರವನ್ನು ಬಿಟ್ಟು ಹೋಗಿದ್ದಾರೆ. ಯಾಕೆ ಈ ರೀತಿಯ ಸುಳ್ಳನ್ನು ಹೇಳುತ್ತಾರೆ, ಶಾಸಕರು ತಮ್ಮ ಜವಾಬ್ದಾರಿಯನ್ನು ಮರೆತಂತೆ ಕಾಣುತ್ತದೆ ಎಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

16 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

16 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

16 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

19 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

23 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

23 hours ago