ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಮನವಿ

ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್  ಮನವಿ

ಶಿವಮೊಗ್ಗ:  ಧರ್ಮಕ್ಕಿಂತ ಕಾನೂನೇ ಮುಖ್ಯ. ಶಾಂತಿಗಾಗಿ ಹೋರಾಟ ಮಾಡಬೇಕೆ ಹೊರತು ನಗರ ವಾಸಿಗಳ  ಮನವನ್ನು ಕದಡುವ ಕೆಲಸವನ್ನಲ್ಲ. ಆರ್ ಎಂಲ್ ನಗರದಲ್ಲಿ ನಡೆದ ಹಲ್ಲೆಯನ್ನು ಕೋಮುಬಣ್ಣಕ್ಕೆ ತಿರುಗಿಸಿ, ಊರಲ್ಲೆಲ್ಲ ಟಾಂ ಟಾಂ ಹೊಡೆದು  ಲಾಭ ಪಡೆಯಲು ಮುಂದಾದ ಶಾಸಕರು ಒಂದು ಕೋಮಿನ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ. ಹೀಗೆ ಮಾಡುವ ಮುನ್ನ ತಾಳ್ಮೆ ವಹಿಸಬೇಕಿತ್ತೆಂದು ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಹೇಳಿದ್ದಾರೆ.

ಶುಕ್ರವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರು ಬಸಪ್ಪ ನಗರದ ಮೇಲ್ಸೇತುವೆಯಲ್ಲಿ ಖಾಸಗಿ ಬಸ್ ಡಿಕ್ಕಿಯಾಗಿ ಒಬ್ಬ ಯುವಕ ಅಪಘಾತದಲ್ಲಿ ಸಾವನ್ನಪ್ಪಿದಾಗ ಯುವಕ ಬೇರೆ ಧರ್ಮಕ್ಕೆ ಸೇರಿದವನು ಎಂಬ ಒಂದೇ ಕಾರಣಕ್ಕೆ ಅವರ ಮನೆಗೆ ಹೋಗಿ ಸಾಂತ್ವನ ಹೇಳಲ್ಲ. ಗಾಯಗೊಂಡವರನ್ನು ವಿಚಾರಿಸಿಯೂ ಇಲ್ಲ. ಯಾಕೆ ಈ ಅಧರ್ಮ ಎಂದು ಪ್ರಶ್ನಿಸಿದರು.


ಶಾಸಕ ಚನ್ನಬಸಪ್ಪ ಅವರಿಗೆ ತಾಳ್ಮೆ, ಸಹನೆ ಕಡಿಮೆ ಇದೆ. ನಗರದಲ್ಲಿ ಯಾವುದೇ ರೀತಿಯ ಘಟನೆಯಾದರೂ ಯೋಚನೆ ಮಾಡದೇ ಅದನ್ನು ಕೋಮು ಬಣ್ಣಕ್ಕೆ ತಿರುಗಿಸಿಬಿಡುತ್ತಾರೆ. ಧರ್ಮದ ಲೇಪನ ಹಚ್ಚುತ್ತಾರೆ. ಇದಕ್ಕೆ ಹರೀಶ್ ಹಲ್ಲೆ ಗಲಾಟೆಯೇ ಇದಕ್ಕೆ ಸಾಕ್ಷಿ. ಈ ಹಲ್ಲೆಯನ್ನು ಒಂದು ಕೋಮಿನವರು ಮಾಡಿದ್ದಾರೆ ಪ್ರಚಾರ ಮಾಡಲಾಯಿತು. 

ಶಾಸಕ ಚನ್ನಬಸಪ್ಪ ಈ ಘಟನೆ ಹೇಗೆ ನಡೆಯಿತು, ಯಾರು ಮಾಡಿದ್ದಾರೆ ಎಂದು ಪೂರ್ವಾಪರ ವಿಚಾರಿಸದೆ ಪೂರ್ವಗ್ರಹಪೀಡಿತರಾಗಿ ಈ ಹಲ್ಲೆಯನ್ನು ಮುಸ್ಲಿಂ ಧರ್ಮದವರೇ ಮಾಡಿದ್ದಾರೆ ಎಂದು ಹರೀಶ್‌ನನ್ನೇ ಬಲವಂತವಾಗಿ ಪೊಲೀಸ್ ಠಾಣೆಗೆ ಕರೆಸಿ ಹೇಳಿಸಿದರು ಎಂದು ವಿವರಿಸಿದರು.
ನಿಜ ತಿಳಿದ ಮೇಲೆ ಘಟನೆಯನ್ನೇ ಬೇರೆ ಕಡೆಗೆ ತಿರುಗಿಸಿ ಗಾಂಜಾವನ್ನೇ ಪ್ರಮುಖವಾಗಿ ಬಿಂಬಿಸುತ್ತಿದ್ದಾರೆ.

ಶಾಸಕರಾದವರು ಧೈರ್ಯ ಹೇಳಬೇಕೇ ಹೊರತೂ ಇಲ್ಲಿರುವ ಹಿಂದೂಗಳು ಮುಸ್ಲೀಮರಿಂದಾಗಿ ಊರು ಬಿಟ್ಟು ಹೋಗುತ್ತಾರೆ ಎಂದು ಹೇಳಬಾರದು. ಯಾವ ಹಿಂದೂಗಳು ಶಿವಮೊಗ್ಗ ನಗರವನ್ನು ಬಿಟ್ಟು ಹೋಗಿದ್ದಾರೆ. ಯಾಕೆ ಈ ರೀತಿಯ ಸುಳ್ಳನ್ನು ಹೇಳುತ್ತಾರೆ, ಶಾಸಕರು ತಮ್ಮ ಜವಾಬ್ದಾರಿಯನ್ನು ಮರೆತಂತೆ ಕಾಣುತ್ತದೆ ಎಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

19 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

19 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

23 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago