ಡಿ ಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ
ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘವು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದೆ.
ಪತ್ರಿಕಾ ಪ್ರಕಟಣೆ ಹೊರಡಿಸಿರುವ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ನಾಯಕರು, ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿ, ಸಂಘಟನೆ ಬಲಪಡಿಸಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ನೀಡದೇ ಕಡೆಗಣಿಸಬಾರದೆಂದು ಹೇಳಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ಗೆ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿದ್ದು, ಪಕ್ಷ ಅಧಿಕಾರಕ್ಕೆ ಬರಲು ಸಹಕಾರಿಯಾಗಿದ್ದರೆಂದು ಸಂಘ ತಿಳಿಸಿದೆ. ಅಹಮದ್ ಪಟೇಲ್ ರಾಜ್ಯಸಭೆಗೆ ಆಯ್ಕೆಯಾಗಲು ಡಿ.ಕೆ. ಶಿವಕುಮಾರ್ ಮಹತ್ವದ ಪಾತ್ರ ವಹಿಸಿ, ಅದಕ್ಕಾಗಿ ಜೈಲು ವಾಸವನ್ನೂ ಅನುಭವಿಸಿದ್ದನ್ನು ಅವರು ನೆನಪಿಸಿದರು.
ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ ಶಿವಕುಮಾರ್ ಅವರಿಗೆ ನೀಡಿದ್ದ ಮಾತಿನಂತೆ ಮುಖ್ಯಮಂತ್ರಿ ಸ್ಥಾನ ನೀಡಿ ಗೌರವಿಸಬೇಕೆಂದು ಒಕ್ಕಲಿಗರ ಸಂಘ ಒತ್ತಾಯ ಮಾಡಿದೆ.
ಸಂಘದ ಅಧ್ಯಕ್ಷ ಎಂ.ಬಿ. ಲಕ್ಷ್ಮಣಗೌಡ, ಗೌರವಾಧ್ಯಕ್ಷ ಹರೀಶ್ ಹೆಚ್.ವಿ., ಉಪಾಧ್ಯಕ್ಷರು ಎಂ.ಎಂ. ಪರಮೇಶ್, ವಜ್ರಾಕ್ಷಮ್ಮ, ಕಾರ್ಯದರ್ಶಿ ಇ.ಡಿ. ಮಂಜುನಾಥ ಕಲ್ಲೂರು, ಸಹಕಾರ್ಯದರ್ಶಿ ಬಿ.ಎಚ್. ಷಣ್ಮುಖಪ್ಪಗೌಡ, ಹೆಚ್.ವೈ. ಸಂತೋಷಕುಮಾರ್, ಖಜಾಂಚಿ ಟಿ.ಎಂ. ಕೃಷ್ಣಮೂರ್ತಿ ಸೇರಿದಂತೆ ಹಲವರು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…