ಡಿ ಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ
ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘವು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದೆ.
ಪತ್ರಿಕಾ ಪ್ರಕಟಣೆ ಹೊರಡಿಸಿರುವ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ನಾಯಕರು, ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿ, ಸಂಘಟನೆ ಬಲಪಡಿಸಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ನೀಡದೇ ಕಡೆಗಣಿಸಬಾರದೆಂದು ಹೇಳಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ಗೆ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿದ್ದು, ಪಕ್ಷ ಅಧಿಕಾರಕ್ಕೆ ಬರಲು ಸಹಕಾರಿಯಾಗಿದ್ದರೆಂದು ಸಂಘ ತಿಳಿಸಿದೆ. ಅಹಮದ್ ಪಟೇಲ್ ರಾಜ್ಯಸಭೆಗೆ ಆಯ್ಕೆಯಾಗಲು ಡಿ.ಕೆ. ಶಿವಕುಮಾರ್ ಮಹತ್ವದ ಪಾತ್ರ ವಹಿಸಿ, ಅದಕ್ಕಾಗಿ ಜೈಲು ವಾಸವನ್ನೂ ಅನುಭವಿಸಿದ್ದನ್ನು ಅವರು ನೆನಪಿಸಿದರು.
ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ ಶಿವಕುಮಾರ್ ಅವರಿಗೆ ನೀಡಿದ್ದ ಮಾತಿನಂತೆ ಮುಖ್ಯಮಂತ್ರಿ ಸ್ಥಾನ ನೀಡಿ ಗೌರವಿಸಬೇಕೆಂದು ಒಕ್ಕಲಿಗರ ಸಂಘ ಒತ್ತಾಯ ಮಾಡಿದೆ.
ಸಂಘದ ಅಧ್ಯಕ್ಷ ಎಂ.ಬಿ. ಲಕ್ಷ್ಮಣಗೌಡ, ಗೌರವಾಧ್ಯಕ್ಷ ಹರೀಶ್ ಹೆಚ್.ವಿ., ಉಪಾಧ್ಯಕ್ಷರು ಎಂ.ಎಂ. ಪರಮೇಶ್, ವಜ್ರಾಕ್ಷಮ್ಮ, ಕಾರ್ಯದರ್ಶಿ ಇ.ಡಿ. ಮಂಜುನಾಥ ಕಲ್ಲೂರು, ಸಹಕಾರ್ಯದರ್ಶಿ ಬಿ.ಎಚ್. ಷಣ್ಮುಖಪ್ಪಗೌಡ, ಹೆಚ್.ವೈ. ಸಂತೋಷಕುಮಾರ್, ಖಜಾಂಚಿ ಟಿ.ಎಂ. ಕೃಷ್ಣಮೂರ್ತಿ ಸೇರಿದಂತೆ ಹಲವರು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…