ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ – ಮಧು ಬಂಗಾರಪ್ಪ

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ : ಮಧು ಬಂಗಾರಪ್ಪ

ಶಿವಮೊಗ್ಗ : 2026-27 ನೇ ಸಾಲಿಗೆ ಜಿಲ್ಲಾ ಪಂಚಾಯತ್, ತಾ.ಪಂ, ಗ್ರಾ.ಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಷಿಕ ಕರಡು ಅಭಿವೃದ್ದಿ ಯೋಜನೆಗೆ ರೂ. 68 ಸಾವಿರ ಕೋಟಿ ಅನುದಾನ ಬೇಡಿಕೆಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.

ಶುಕ್ರವಾರ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಿವಿಧ ಇಲಾಖೆಗಳಡಿ ಮೂಲಭೂತ ಸೌಕರ್ಯ ಹಾಗೂ ಅಭಿವೃದ್ದಿ ಕಾಮಗಾರಿಗಳಿಗೆ ರೂ.68 ಸಾವಿರ ಕೋಟಿ ಅನುದಾನ ಬೇಡಿಕೆ ಕುರಿತು ಸಭೆ ಚರ್ಚೆ ನಡೆಸಲಿದೆ ಎಂದರು.

ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಮಾತನಾಡಿ, ಯೋಜನಾ ಸಮಿತಿ ಸಭೆಗೆ ಸಂಬಂಧಿಸಿದಂತೆ ತಾಲ್ಲೂಕುಗಳಲ್ಲಿ ಪೂರ್ವಭಾವಿ ಸಭೆ ಆಗಿಲ್ಲ. ಶಾಸಕರ ಅನುಮೋದನೆ ಪಡೆದಿಲ್ಲ. ಆದ್ದರಿಂದ ತಾಲ್ಲೂಕು ಇಓ ಗಳು ಜಿಲ್ಲಾ ಸಭೆ ಕುರಿತು ಶಾಸಕರ ಗಮನಕ್ಕೆ ತಂದು ಜಿಲ್ಲಾ ಯೋಜನಾ ಸಮಿತಿ ಸಭೆ ಮಾಡಬೇಕೆಂದರು.

ಶಾಸಕರಾದ ಶಾರದಾ ಪೂರ್ಯಾಯ್ಕರವರು ಮಾತನಾಡಿ, ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ವ್ಯವಸ್ಥಿತವಾಗಿ ಮಾಡಬೇಕು ಎಂದು ಸಲಹೆ ನೀಡಿದರು.
ಸಚಿವರು ಪ್ರತಿಕ್ರಿಯಿಸಿ, ತಾಲ್ಲೂಕುಗಳಲ್ಲಿ ಸೋಮವಾರವೇ ಕರಡು ಅಭಿವೃದ್ದಿ ಯೋಜನೆಗೆ ಸಂಬAಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ, ಶಾಸಕರ ಅನುಮೋದನೆ ಪಡೆದ ನಂತರ ಜಿಲ್ಲಾ ಸಭೆ ನಡೆಸೋಣ ಎಂದರು.

ಜಿ.ಪಂ ಯೋಜನಾ ನಿರ್ದೇಶಕ ಹನುಮನಾಯಕ್ ಮಾತನಾಡಿ, ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿಯಿಂದ ಆರು ಜನ ಸದಸ್ಯರು ಸಮಿತಿಗೆ ಅವಿರೋಧ ಆಯ್ಕೆಯಾಗಿದ್ದು, ಸಮಿತಿ ಸಭೆಗೂ ಮುನ್ನ ಮೂರು ಹಂತದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದರು.

ಜಿ.ಪಂ ಸಿಇಓ ಹೇಮಂತ್ ಎನ್ ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮಿಷನ್ ಸುರಕ್ಷಾ ಅಭಿಯಾನ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕಳೆದ 5 ತಿಂಗಳಿಂದ ಸತತವಾಗಿ ಜಾಗೃತಿ ಮೂಡಿಸಲಾಗುತ್ತಿದ್ದು ಸೆಪ್ಟೆಂಬರ್ ಮಾಹೆಯಿಂದ ಇಲ್ಲಿಯವೆಗೆ 25 ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ 22 ಕ್ರಿಯಾ ಯೋಜನೆ ರೂಪಿಸಿ ಕ್ರಮ ವಹಿಸಲಾಗುತ್ತಿದೆ. ಗ್ರಾಮಗಳಲ್ಲಿ ಹೆಚ್ಚಿನ ಸಮಸ್ಯೆ ಇರುವ ಮಕ್ಕಳನ್ನು ಗ್ರಾ.ಪಂ ವತಿಯಿಂದ ದತ್ತು ತೆಗೆದುಕೊಳ್ಳಲಾಗುತ್ತಿದೆ ಎಂದರು.

ದಸರಾ ಶಿಬಿರದಲ್ಲಿ ‘ನಮ್ಮ ಊರು ನಮ್ಮ ಬೇರು’ ಕಾರ್ಯಕ್ರಮದಡಿ ಗ್ರಾ.ಪಂ ಗಳ ಗ್ರಂಥಾಲಯಲಕ್ಕೆ ಬರುವ ಮಕ್ಕಳಿಂದ ರಾಜಕೀಯ, ಆಡಳಿತ, ಸಾಮಾಜಿಕ, ಆರ್ಥಿಕ, ನಾಗರೀಕರತೆ ಹೀಗೆ ವಿವಿಧ ವಿಷಯಗಳನ್ನೊಳಗೊಂಡ ‘ಪರಂಪರೆ’ ಎಂಬ ಪುಸ್ತಕವನ್ನು ಗ್ರಾ.ಪಂ ಗಳ ಗ್ರಂಥಾಲಯಗಳಿಂದ ಪ್ರಕಟಿಸಿದ್ದು, ಅತ್ಯುತ್ತಮವಾಗಿ ಪ್ರಕಟಿಸಿದ ನಾಲ್ಕು ಗ್ರಾ.ಪಂ ಗ್ರಂಥಾಲಯಗಳಾದ ಹೊಸನಗರದ ಹರಿದ್ರಾವತಿ ಗ್ರಾ.ಪಂ, ಸಾಗರದ ಹಿರೇನಲ್ಲೂರು ಗ್ರಾ.ಪಂ, ತೀರ್ಥಹಳ್ಳಿಯ ಬೆಜ್ಜವಳ್ಳಿ ಹಾಗೂ ಸೊರಬದ ಕುಪ್ಪೆಗುಡ್ಡೆ ಗ್ರಾ.ಪಂ ಗ್ರಂಥಾಲಯಗಳಿಗೆ ಪ್ರಶಸ್ತಿಯನ್ನು ಇದೇ ಸಂದರ್ಭದಲ್ಲಿ ನೀಡಿ ಗೌರವಿಸಲಾಯಿತು.

ಸಭೆಯಲ್ಲಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಎಸ್.ಎನ್.ಚನ್ನಬಸಪ್ಪ, ಎಂಎಡಿಬಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ ಗೌಡ, ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಗಳು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

19 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

19 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

19 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

19 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

1 day ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

2 days ago