ಅಡಿಕೆ ಗೊನೆ ಕೀಳುವಾಗ ವಿದ್ಯುತ್ ಶಾಕ್ — ಕಾರ್ಮಿಕನ ದುರ್ಮರಣ
ತೀರ್ಥಹಳ್ಳಿ: ತಾಲೂಕಿನ ಬಸವಾನಿ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಅಡಿಕೆ ಗೊನೆ ಕೀಳುವಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಶನಿವಾರ ಸಂಜೆ ನಡೆದಿದೆ.
ಮೃತನನ್ನು ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಎಂದು ಗುರುತಿಸಲಾಗಿದೆ. ಸತೀಶ್ ಹಲವು ವರ್ಷಗಳಿಂದ ಈ ಭಾಗದಲ್ಲಿ ಗೊನೆಗಾರನಾಗಿ ಕೆಲಸ ಮಾಡುತ್ತಿದ್ದು, ಲಕ್ಷ್ಮೀಪುರದ ರೈತರಿಬ್ಬರ ಅಡಿಕೆ ತೋಟದಲ್ಲಿ ಗೊನೆ ಕೀಳುವ ವೇಳೆ ಆತನ ಕೈಯಲ್ಲಿ ಇದ್ದ ದೋಟಿ ಆಕಸ್ಮಿಕವಾಗಿ ಮೇಲಿನ ವಿದ್ಯುತ್ ತಂತಿಗೆ ತಾಗಿದ ಪರಿಣಾಮ ಈ ಅನಾಹುತ ಸಂಭವಿಸಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…