ರಿಪ್ಪನ್ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ
ರಿಪ್ಪನ್ ಪೇಟೆ : ಪಟ್ಟಣದ ಕಲಾಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಿಪ್ಪನ್ಪೇಟೆಯಲ್ಲಿ ಆಯೋಜಿಸಲಾದ ಕರುನಾಡ ಕನ್ನಡ ಹಬ್ಬದ ಸಂಭ್ರಮಾಚರಣೆಯ ಕನ್ನಡಾಂಬೆಯ ಭವ್ಯ ಮೆರವಣಿಗೆ ಜನಮೆಚ್ಚುಗೆ ಗಳಿಸಿತು. ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಮಕ್ಕಳ ಛದ್ಮವೇಷಗಳ ಕಲಾಕರ್ಷಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿತು.
ಕನ್ನಡಾಂಬೆಯ ಮೆರವಣಿಗೆಗೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜುರೆಡ್ಡಿ ಕನ್ನಡ ಬಾವುಟವನ್ನು ಎತ್ತಿಹಿಡಿದು ಚಾಲನೆ ನೀಡಿ ಮಾತನಾಡಿದರು. “ಕನ್ನಡ ನವೆಂಬರ್ ತಿಂಗಳಿಗೆ ಸೀಮಿತವಾಗದೆ ಪ್ರತಿದಿನದ ಹೃದಯ ಭಾಷೆಯಾಗಬೇಕು. ಕರ್ನಾಟಕದ ಸಂಸ್ಕೃತಿ, ಪರಂಪರೆ ಮತ್ತು ಸಿರಿ-ಸಂಪತ್ತು ವಿಶ್ವದಾದ್ಯಂತ ಕನ್ನಡದ ಹೆಮ್ಮೆ ಹೆಚ್ಚಿಸುತ್ತಿವೆ. ಇಂತಹ ಕಾರ್ಯಕ್ರಮಗಳು ಯುವಪೀಳಿಗೆಯಲ್ಲಿ ಸಂಸ್ಕೃತಿ ಸಂರಕ್ಷಣೆಗೆ ಪ್ರೇರಣೆ ನೀಡಬೇಕು,” ಎಂದು ಅವರು ಹೇಳಿದರು.
ಕಲಾಕೌಸ್ತುಭ ಸಂಘದ ಮಾಜಿ ಅಧ್ಯಕ್ಷ ಎಂ.ಬಿ. ಮಂಜುನಾಥ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಸಂಘದ ಅಧ್ಯಕ್ಷ ಮುರುಳಿಧರ ಕೆರೆಹಳ್ಳಿ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯೋತ್ಸವ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷ್ಮಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಂಚಾಯತ್ ಸದಸ್ಯರು ಮಹಾಲಕ್ಷ್ಮಿ, ಅಶ್ವಿನಿ ರವಿಶಂಕರ್, ದೀಪಾ ಸುಧೀರ್, ವಿನೋಧ, ರವೀಂದ್ರ ಕೆರೆಹಳ್ಳಿ, ಎಂ. ಸುರೇಶಸಿಂಗ್, ತ.ಮ. ನರಸಿಂಹ, ಪದ್ಮಾ ಸುರೇಶ್, ಉಮಾ ಸುರೇಶ್, ನಿವೃತ್ತ ಯೋಧೆ ಪದ್ಮಾ ಹಾಗು ಇತರ ಗಣ್ಯರು ಭಾಗವಹಿಸಿ ಮಾತನಾಡಿದರು.
ನಾಗರತ್ನ ದೇವರಾಜ್ ಪ್ರಾರ್ಥನೆ ಸಲ್ಲಿಸಿದರು. ರವೀಂದ್ರ ಕೆರೆಹಳ್ಳಿ ಸ್ವಾಗತಿಸಿದರು ಮತ್ತು ಉಮಾ ಸುರೇಶ್ ಕಾರ್ಯಕ್ರಮದ ನಿರೂಪಣೆ ಮಾಡಿದರು.
ಈ ಸಂದರ್ಭದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ಭುವನೇಶ್ವರಿಯ ಜಯಘೋಷಣೆ ಕೂಗಿ, ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಅದ್ಧೂರಿ ಮೆರವಣಿಗೆ ನಡೆಸುವ ಮೂಲಕ ರಾಜ್ಯೋತ್ಸವದ ಸಂಭ್ರಮ ಹೆಚ್ಚಿಸಿದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…