ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಪೋಸ್ಟ್ ಮ್ಯಾನ್ ನ್ಯೂಸ್  ಕಚೇರಿ ಉದ್ಘಾಟನೆ

ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ: “ಮಾಧ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಯಂತ್ರವಲ್ಲ, ಅದು ಸಂವಿಧಾನದ ನಾಲ್ಕನೆಯ ಅಂಗವಾಗಿ ಸಾರ್ವಜನಿಕರ ಧ್ವನಿ ಮತ್ತು ಪ್ರಜಾಪ್ರಭುತ್ವದ ಶಕ್ತಿ. ವರದಿಗಾರಿಕೆಯಲ್ಲಿ ನೇರವಂತಿಕೆ, ನೈಜತೆ ಹಾಗೂ ಪತ್ರಕರ್ತರ ನಿಷ್ಠೆ ಉಳಿಯುವ ಮಟ್ಟಕ್ಕೆ ಸಮಾಜದಲ್ಲಿಯೂ ವಿಶ್ವಾಸ ಮತ್ತು ಗೌರವ ಉಳಿಯುತ್ತದೆ” ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಉದ್ಘಾಟಿಸಲ್ಪಟ್ಟ ‘ಪೋಸ್ಟ್ ಮ್ಯಾನ್ ನ್ಯೂಸ್’ ಕಚೇರಿಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಕೆಲ ವರ್ಷಗಳಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ವೇದಿಕೆಗಳ ಅಬ್ಬರದಿಂದಾಗಿ ಮಾಹಿತಿ ಪ್ರಸರಣದ ವೇಗ ಹೆಚ್ಚಾದರೂ, ನೈಜ ಸುದ್ದಿಯ ಸ್ವರೂಪದಲ್ಲಿ ಹಿನ್ನಡೆ ಉಂಟಾಗಿದೆ ಎಂದು ವಿಷಾದಿಸಿದರು. “ಮಾಹಿತಿಯನ್ನು ಮೊದಲಿಗರಾಗಿ ನೀಡುವ ಸ್ಪರ್ಧೆಯಲ್ಲಿ ಹಲವರು ದೃಢೀಕರಣ, ವಾಸ್ತವ ಪರಿಶೀಲನೆ ಮತ್ತು ನೈತಿಕ ಮೌಲ್ಯಗಳನ್ನು ಕಡೆಗಣಿಸುತ್ತಿರುವುದು ಚಿಂತಾಜನಕ. ಓದುಗರು ಇಂದು ನೈಜ ಮತ್ತು ವಾಸ್ತವಾಧಾರಿತ ಸುದ್ದಿಯನ್ನು ಹುಡುಕುತ್ತಿದ್ದಾರೆ. ನಂಬಿಕೆಗೆ ತಕ್ಕ ಮಾಹಿತಿಯನ್ನು ನೀಡುವುದು ಮಾಧ್ಯಮಗಳ ಮೂಲ ಕರ್ತವ್ಯ” ಎಂದರು.

ಅವರು ಮುಂದುವರೆದು, ‘ಪೋಸ್ಟ್ ಮ್ಯಾನ್ ನ್ಯೂಸ್’ ಸಂಸ್ಥೆಯು ಕಳೆದ ಐದು ವರ್ಷಗಳಿಂದ ಮಲೆನಾಡಿನ ಜನರ ನಾಡಿ ಸ್ಪರ್ಶಿಸುವಂತೆ ನೈಜ ಸುದ್ದಿಯನ್ನು ನಿರಂತರವಾಗಿ ಪ್ರಕಟಿಸುತ್ತಾ ಸ್ಥಳೀಯ ಮಟ್ಟದಲ್ಲಿ ವಿಶ್ವಾಸಾರ್ಹತೆ ಗಳಿಸಿರುವುದು ಶ್ಲಾಘನೀಯ ಬೆಳವಣಿಗೆ ಎಂದು ಹೇಳಿದರು. “ರಫ಼ಿ ರಿಪ್ಪನ್ ಪೇಟೆ ನೇತ್ರತ್ವದ ಪೋಸ್ಟ್ ಮ್ಯಾನ್ ನ್ಯೂಸ್ ತಂಡ  ಸುದ್ದಿಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲನೆ ಮಾಡಿ, ನೈಜತೆಯನ್ನು ಕಾಪಾಡುವ ರೀತಿಯಲ್ಲಿ ಪ್ರಕಟಿಸುತ್ತಿರುವುದು ವೃತ್ತಿಪರತೆಗೆ ಮಾದರಿ. ಇಂತಹ ನಿಷ್ಠೆಯೇ ಮಾಧ್ಯಮದ ಗಟ್ಟಿತನ” ಎಂದು ಬೇಳೂರು ಪ್ರಶಂಸೆ ಸಲ್ಲಿಸಿದರು.

“ಮಾಧ್ಯಮಗಳು ಸಮಾಜಕ್ಕೆ ದಿಕ್ಕು ತೋರಿಸಬೇಕು. ಜನಪ್ರತಿನಿಧಿಗಳ ಕೆಲಸಗಳಾಗಲಿ, ಸರ್ಕಾರಿ ಯೋಜನೆಗಳ ಅನುಷ್ಠಾನವಾಗಲಿ, ಸಾರ್ವಜನಿಕರ ವ್ಯಥೆಗಳಾಗಲಿ… ಎಲ್ಲವನ್ನೂ ನಿಷ್ಪಕ್ಷಪಾತವಾಗಿ ಮಂಡಿಸುವ ಶಕ್ತಿಯೇ ಪತ್ರಕರ್ತಿಕೆಗೆ ಗೌರವ ತರುತ್ತದೆ. ಮಾಹಿತಿ ಯುಗದಲ್ಲಿ ನೈಜ ಮತ್ತು ವಾಸ್ತವಾಧಾರಿತ ಸುದ್ದಿಯ ಅಗತ್ಯ ಹೆಚ್ಚಿದೆ. ಜನರ ಸಮಸ್ಯೆಗಳನ್ನು ಧ್ವನಿಕರಿಸುವ ವೇದಿಕೆಗಳನ್ನು ಸಮಾಜ ಎಂದಿಗೂ ಮರೆಯುವುದಿಲ್ಲ” ಎಂದು ಹೇಳಿದರು.

“ಇಂದಿನ ಓದುಗರು ಜಾಗೃತರು, ಚರ್ಚಿಸಬಲ್ಲರು, ವಿಶ್ಲೇಷಿಸಬಲ್ಲರು. ಸುಳ್ಳು ಸುದ್ದಿ ಮತ್ತು ಅತಿರೇಕದ ವರದಿ ಮಾಡಿದರೆ ಕ್ಷಣದಲ್ಲಿ ಪತ್ತೆಹಚ್ಚುತ್ತಾರೆ. ಆದ್ದರಿಂದ ನೈಜತೆ ಮತ್ತು ನೇರವಂತಿಕೆಯೇ ಮಾಧ್ಯಮಗಳ ಭವಿಷ್ಯವನ್ನು ನಿರ್ಧರಿಸುವ ಪ್ರಮುಖ ಅಂಶ.”
ಬೇಳೂರು ಗೋಪಾಲಕೃಷ್ಣ

ಉದ್ಘಾಟನಾ ಕಾರ್ಯಕ್ರಮದಲ್ಲಿ ಬಗರುಹುಕುಂ ಸಮಿತಿ ಅಧ್ಯಕ್ಷೆ ಸಾಕಮ್ಮ , ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಸದಸ್ಯರಾದ ಆಸಿಫ್ ಭಾಷಾ, ನಿರೂಪ್ ಕುಮಾರ್, ಮಧುಸೂದನ್,ರಮೇಶ್ ಪಿ, ಪ್ರಕಾಶ್ ಪಾಲೇಕರ್,ಪತ್ರಕರ್ತರಾದ ಪರಶುರಾಮ್ ಕೆರೆಹಳ್ಳಿ , ಚಿದಾನಂದ್ ಸ್ವಾಮಿ , ನಾಗೇಶ್ ನಾಯ್ಕ್ , ತ ಮ ನರಸಿಂಹ ,ಗ್ಯಾರಂಟಿ ಸಮಿತಿ ಸದಸ್ಯ ರವೀಂದ್ರ ಕೆರೆಹಳ್ಳಿ, ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪ ಗೌಡ , ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು,ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ , ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಜಿ ಆರ್ ಗೋಪಾಲಕೃಷ್ಣ , ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ಎ ಚಾಬುಸಾಬ್,ಜೆಡಿಎಸ್ ತಾಲೂಕ್ ಅಧ್ಯಕ್ಷ ಎನ್ ವರ್ತೇಶ್ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷ ಪಿಯೂಸ್  ರೋಡ್ರಿಗಸ್, ಪ್ರಮುಖರಾದ ಸಾಧಿಕ್ ಕಚ್ಚಿಗೆಬೈಲ್  , ಶಿವಾನಂದ್ ,ಕಗ್ಗಲಿ ಲಿಂಗಪ್ಪ , ಹರೀಶ್ ಪ್ರಭು,  ಶ್ರೀಧರ್ ಚಿಗುರು , ಸಾಜಿದಾ ಹನೀಫ಼್  ಸೇರಿದಂತೆ ಇನ್ನಿತರರಿದ್ದರು.

ಪೋಸ್ಟ್ ಮ್ಯಾನ್ ನ್ಯೂಸ್ ಸಂಪಾದಕ ರಫ಼ಿ ರಿಪ್ಪನ್ ಪೇಟೆ ಸ್ವಾಗತಿಸಿದರು, ಗೌರವ ಸಂಪಾದಕ ಸೆಬಾಸ್ಟಿಯನ್ ಮ್ಯಾಥ್ಯೂಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

18 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

18 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

22 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

24 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago