Categories: Blog

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ.

ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ ಸಾರ್ವಜನಿಕ ಬದುಕಿನಲ್ಲಿ ತಾವು ನಡೆದ ಹಾದಿಯಿಂದಲೇ ವಿಶಿಷ್ಟ ಗುರುತಿಸಿಕೊಂಡಿದ್ದರು. ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ಹಿರಿಯ ಮುಖಂಡರವರೆಗೂ ಎಲ್ಲರೊಂದಿಗೂ ಅಕ್ಕರೆಯಿಂದ ವರ್ತಿಸುವ ಗುಣ, ಸಾರ್ವಜನಿಕ ಹಿತಾಸಕ್ತಿ ವಿಷಯಗಳಲ್ಲಿ ತುರ್ತು ಕ್ರಮ ಕೈಗೊಳ್ಳುವ ಚಟುವಟಿಕೆ, ಹಾಗೂ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸುವ ನಿಲುವಿನ ಮೂಲಕ ಅವರು ಜನಮನ ಗೆದ್ದಿದ್ದರು.ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಸುಬ್ಬಣ್ಣ ಅವರ ಅಗಲಿಕೆಯಿಂದ ಒಂದು ನಿಸ್ವಾರ್ಥ ಹೋರಾಟಗಾರನನ್ನು ಕಳೆದುಕೊಂಡ ಭಾವನೆ ಸ್ಥಳೀಯರಲ್ಲಿ ಮೂಡಿದೆ.

ಸ್ಥಳೀಯ ಬಿಜೆಪಿ ಘಟಕ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಹಿತೈಷಿಗಳು, ಗ್ರಾಮಸ್ಥರು ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.ನಗರದ ಸ್ವಗೃಹದಲ್ಲಿ ಮೃತದೇಹವನ್ನು ಇರಿಸಲಾಗಿದೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

18 hours ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

18 hours ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

20 hours ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

21 hours ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

21 hours ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

1 day ago