ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ
ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ.
ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ ಸಾರ್ವಜನಿಕ ಬದುಕಿನಲ್ಲಿ ತಾವು ನಡೆದ ಹಾದಿಯಿಂದಲೇ ವಿಶಿಷ್ಟ ಗುರುತಿಸಿಕೊಂಡಿದ್ದರು. ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ಹಿರಿಯ ಮುಖಂಡರವರೆಗೂ ಎಲ್ಲರೊಂದಿಗೂ ಅಕ್ಕರೆಯಿಂದ ವರ್ತಿಸುವ ಗುಣ, ಸಾರ್ವಜನಿಕ ಹಿತಾಸಕ್ತಿ ವಿಷಯಗಳಲ್ಲಿ ತುರ್ತು ಕ್ರಮ ಕೈಗೊಳ್ಳುವ ಚಟುವಟಿಕೆ, ಹಾಗೂ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸುವ ನಿಲುವಿನ ಮೂಲಕ ಅವರು ಜನಮನ ಗೆದ್ದಿದ್ದರು.ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಸುಬ್ಬಣ್ಣ ಅವರ ಅಗಲಿಕೆಯಿಂದ ಒಂದು ನಿಸ್ವಾರ್ಥ ಹೋರಾಟಗಾರನನ್ನು ಕಳೆದುಕೊಂಡ ಭಾವನೆ ಸ್ಥಳೀಯರಲ್ಲಿ ಮೂಡಿದೆ.
ಸ್ಥಳೀಯ ಬಿಜೆಪಿ ಘಟಕ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಹಿತೈಷಿಗಳು, ಗ್ರಾಮಸ್ಥರು ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.ನಗರದ ಸ್ವಗೃಹದಲ್ಲಿ ಮೃತದೇಹವನ್ನು ಇರಿಸಲಾಗಿದೆ
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…