ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ
ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಪಡಿತರ ಅಕ್ಕಿಯ ದೊಡ್ಡ ಮೊತ್ತವನ್ನು ಬಂಕಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಶರೀಫ್ ನಗರ ನಿವಾಸಿ ಜಯದೇವ್ ಮಾಮ್ಲೆ ಪಟ್ಟಣಶೆಟ್ಟರ ಮಲ್ಲಿಕಾರ್ಜು ಎಂಬ ವ್ಯಕ್ತಿಯು ಬಾಡಿಗೆಗೆ ಪಡೆದಿದ್ದ ಮಲ್ಲೇಶಪ್ಪ ಮಾಳಗಿಮನಿ ಅವರ ಗೋದಾಮಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು.
ದಾಳಿಯಲ್ಲಿ ಸುಮಾರು ₹3.34 ಲಕ್ಷ ಮೌಲ್ಯದ 380 ಚೀಲಗಳ ಅಕ್ಕಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಸಂಬಂಧಪಟ್ಟ ಆರೋಪಿಗಳ ವಿರುದ್ಧ ತನಿಖೆ ಪ್ರಗತಿಯಲ್ಲಿದೆ.
ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ – ಬಂಕಾಪುರ ಪೊಲೀಸ್ ಜಪ್ತಿ
ವರದಿ : ನಿಂಗರಾಜ್ ಕುಡಲ್, ಹಾವೇರಿ ಜಿಲ್ಲೆ – ಬಂಕಾಪುರ
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…