ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ!
ಶಿವಮೊಗ್ಗ: ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ರಸ್ತೆಯಲ್ಲೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ.
ಮಂಡಗದ್ದೆ ಬಳಿ ವೇಗವಾಗಿ ಬರುತ್ತಿದ್ದ ಬಸ್ಗೆ ಕಾಡಾನೆ ದಿಢೀರ್ ಎದುರಾಗಿದೆ. ಅನಿರೀಕ್ಷಿತವಾಗಿ ಆನೆಯನ್ನು ನೋಡಿದ ಬಸ್ ಚಾಲಕ ತಕ್ಷಣವೇ ಬಸ್ ಅನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ.
ಈ ಘಟನೆಯಿಂದಾಗಿ ಬಸ್ನಲ್ಲಿದ್ದ ಪ್ರಯಾಣಿಕರು ಒಮ್ಮೆಲೆ ಆತಂಕಕ್ಕೊಳಗಾದರು. ಹಲವರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಆನೆಯ ಚಿತ್ರಗಳನ್ನು ಸೆರೆಹಿಡಿದರೆ, ಇನ್ನು ಕೆಲವರು ಗಾಬರಿಯಾಗಿದ್ದರು. ಕೆಲಕಾಲ ರಸ್ತೆಯಲ್ಲೇ ನಿಂತಿದ್ದ ಸಲಗ ನಂತರ ನಿಧಾನವಾಗಿ ಕಾಡಿನತ್ತ ತೆರಳಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಇದರಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…