ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ
ಶಿವಮೊಗ್ಗ: ಜಿಲ್ಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆರಗ ಜ್ಞಾನೇಂದ್ರ ಕುರಿತು ಮಾಡಿದ ಏಕವಚನದ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಹಿರಿಯ ನಾಯಕ ಹಾಗೂ ಹಾಲಿ ಶಾಸಕರಾದ ಜ್ಞಾನೇಂದ್ರ ಕುರಿತು ಹಗುರ ಸ್ವರೂಪದ ಮಾತು ಬಳಸಿರುವುದು ರಾಜಕೀಯ ಶಿಸ್ತಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕರು ಆರೋಪಿಸಿದ್ದಾರೆ.
ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿಲಾಶ್ ಬಿ ಚಿಕ್ಕಮಣತಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿ, ಸಚಿವರ ಹೇಳಿಕೆ “ಅಸಮಂಜಸ ಮತ್ತು ಅವಮಾನಕಾರಿ” ಎಂದಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಹಿರಿಯ ನಾಯಕರ ಗೌರವ ಕಾಪಾಡುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ ಎಂದು ಅವರು ತಿಳಿಸಿದ್ದಾರೆ.
ಮಧು ಬಂಗಾರಪ್ಪ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು ಮತ್ತು ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡಬೇಕು ಎಂದು ಅಭಿಲಾಶ್ ಒತ್ತಾಯಿಸಿದ್ದಾರೆ. ಅದೇ ವೇಳೆ, ರಾಜಕೀಯ ಸಂಸ್ಕೃತಿ ಮತ್ತು ಸಾರ್ವಜನಿಕ ಜೀವನದ ಗಾಂಭೀರ್ಯಕ್ಕೆ ಧಕ್ಕೆ ಬಾರದಂತೆ ಮಂತ್ರಿಗಳು ಜವಾಬ್ದಾರಿಯುತ ನಡೆ ತೋರಬೇಕು ಎಂದು ಹೇಳಿದ್ದಾರೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…