ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ಪೇಟೆ : ಕರ್ನಾಟಕ ರಾಜ್ಯದಲ್ಲಿ ಹಲವು ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಅವಕಾಶಗಳು ಕಡಿಮೆಯಾಗುತ್ತಿವೆ. ಹೊರ ರಾಜ್ಯದವರು ಕೆಲಸ ಪಡೆಯುತ್ತಿರುವುದಕ್ಕೆ ಕಾರಣ ನಮ್ಮದೇ ನಿರ್ಲಕ್ಷ್ಯ. ಸರ್ಕಾರದ ನಿಯಮಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಶಿಫಾರಸು ಈಗಾಗಲೇ ಮಾಡಲಾಗಿದೆ. ಕೈಗಾರಿಕೆ, ಬ್ಯಾಂಕ್, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸ್ಥಳೀಯ ಯುವಕರಿಗೆ ಶೇ. 90 ಉದ್ಯೋಗಾವಕಾಶ ಒದಗಿಸಿದರೆ ನಾಡು ನಿಜವಾದ ಅರ್ಥದಲ್ಲಿ ಅಭಿವೃದ್ಧಿಯಾಗುತ್ತದೆ,” ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು.
ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್ಕುಮಾರ್ ಅಭಿಮಾನಿ ಸಂಘದ ಐದನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಉದ್ಘಾಟಿಸಿ ಮಾತನಾಡಿ, “ಕನ್ನಡ ರಾಜ್ಯೋತ್ಸವ ಕೇವಲ ಹಬ್ಬವಲ್ಲ, ಇದು ನಮ್ಮ ಅಸ್ತಿತ್ವದ ಉತ್ಸವ. ಕನ್ನಡದಲ್ಲಿ ವ್ಯವಹರಿಸುವುದು, ಆಡಳಿತ ನಡೆಸುವುದು ಮತ್ತು ಕನ್ನಡಿಗರ ಹಕ್ಕುಗಳಿಗೆ ಧ್ವನಿ ಎತ್ತುವುದು ಪ್ರತಿಯೊಬ್ಬರ ಧರ್ಮ,” ಎಂದು ಹೇಳಿದರು.
ಅವರು ಮುಂದುವರಿಸಿ, “ಹೊಸ ಪೀಳಿಗೆಯವರು ಕನ್ನಡವನ್ನು ಗೌರವದಿಂದ ಬಳಸಬೇಕು. ಮನೆಯಲ್ಲಿಯೂ, ಶಾಲೆಯಲ್ಲಿಯೂ ಕನ್ನಡ ಮಾತನಾಡುವುದನ್ನು ಪ್ರೋತ್ಸಾಹಿಸಬೇಕು. ಇಂದಿನ ದಿನಗಳಲ್ಲಿ ಹಲವು ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಅವಕಾಶಗಳು ಕಡಿಮೆಯಾಗುತ್ತಿರುವುದು ವಿಷಾದನೀಯ. ಹೊರ ರಾಜ್ಯದವರು ಕೆಲಸ ಪಡೆಯುತ್ತಿರುವುದಕ್ಕೆ ನಮ್ಮದೇ ನಿರ್ಲಕ್ಷ್ಯ ಕಾರಣ. ಸರ್ಕಾರದ ನಿಯಮಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಶಿಫಾರಸು ಈಗಾಗಲೇ ಮಾಡಲಾಗಿದೆ. ಕೈಗಾರಿಕೆ, ಬ್ಯಾಂಕ್, ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸ್ಥಳೀಯ ಯುವಕರಿಗೆ ಶೇ.90 ಉದ್ಯೋಗಾವಕಾಶ ನೀಡಿದರೆ ನಾಡು ನಿಜವಾದ ಅರ್ಥದಲ್ಲಿ ಅಭಿವೃದ್ಧಿಯಾಗುತ್ತದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಜಿ.ಆರ್. ಗೋಪಾಲಕೃಷ್ಣ, ಕಾರ್ಯದರ್ಶಿ ಶ್ರೀಧರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕಲಗೋಡು ರತ್ನಾಕರ್, ಉದ್ಯಮಿ ಮಹೇಂದ್ರ, ಬಂಡಿ ರಾಮಚಂದ್ರ, ಶ್ವೇತಾ ಬಂಡಿ,ಕಸ್ತೂರಿ ಕನ್ನಡ ಸಂಘ ಹಾಗೂ ಕಲಾ ಕೌಸ್ತುಭ ಕನ್ನಡ ಸಂಘದ ಪದಾಧಿಕಾರಿಗಳು, ವಿವಿಧ ಪಕ್ಷಗಳ ನಾಯಕರು ಹಾಗೂ ಸಾಮಾಜಿಕ ಸಂಘಟನೆಗಳ ಮುಖಂಡರು, ಕನ್ನಡಾಭಿಮಾನಿಗಳು ಭಾಗವಹಿಸಿ ರಾಜ್ಯೋತ್ಸವದ ಹರ್ಷೋತ್ಸವವನ್ನು ಹಂಚಿಕೊಂಡರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…