ಸಾಲಕ್ಕೆ ಬೇಸತ್ತು ಕಳೆನಾಶಕ ಸೇವಿಸಿ ವ್ಯಕ್ತಿ ಸಾವು
ರಿಪ್ಪನ್ ಪೇಟೆ : ವಿಪರೀತ ಸಾಲದ ಒತ್ತಡದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಕಳೆನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಂದಳ್ಳಿಯಲ್ಲಿ ನಡೆದಿದೆ.
ಚಂದಳ್ಳಿ ಗ್ರಾಮದ ರಾಜು (45) ಮೃತ ವ್ಯಕ್ತಿಯಾಗಿದ್ದಾನೆ.
ಮೃತ ರಾಜು ಅವರ ತಾಯಿ ಪುಟ್ಟಮ್ಮ ಅವರ ಹೆಸರಿನಲ್ಲಿ 1 ಎಕರೆ ಖಾತೆ ಜಮೀನು ಹಾಗೂ 3 ಎಕರೆ ಬಗರ್ಹುಕುಂ ಜಮೀನು ಇದ್ದು, ಕೃಷಿ ಸಂಬಂಧಿತ ಕೆಲಸಗಳಿಗೆ ವಿವಿಧ ಸಂಸ್ಥೆಗಳಿಂದ ಸಾಲ ಪಡೆದಿದ್ದರು.ಈ ಸಾಲದ ವಿಚಾರವನ್ನು ಮನಸ್ಸಿಗೆ ಹಾಕಿಕೊಂಡ ರಾಜು ಪ್ರತಿದಿನ ತಾಯಿಗೆ ಸಾಲದ ಬಗ್ಗೆ ಪ್ರಶ್ನಿಸುತ್ತಿದ್ದು, ಇದರಿಂದ ಮನೋವೈಕಲ್ಯಕ್ಕೊಳಗಾಗಿರುವ ಸೂಚನೆಗಳು ಕಂಡು ಬಂದಿದ್ದವು.
ದಿನಾಂಕ 19-11-2025 ರಂದು ಸಂಜೆ 7 ಗಂಟೆಗೆ ಮನೆಯಲ್ಲಿ ಕಳೆನಾಶಕ ಔಷಧ ಸೇವಿಸಿದ ರಾಜು ವಾಂತಿ ಮಾಡುತ್ತಿದ್ದನ್ನು ತಾಯಿ ಪುಟ್ಟಮ್ಮ ಗಮನಿಸಿ ತಕ್ಷಣ ನೆರವಿಗೆ ಕೂಗಿಕೊಂಡರು. ನಂತರ 108 ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಆದರೆ, ಚಿಕಿತ್ಸೆ ಫಲಕಾರಿಯಾಗದೇ 20-11-2025 ರಂದು ಬೆಳಗ್ಗೆ 5.30ಕ್ಕೆ ರಾಜು ಮೃತಪಟ್ಟಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…