ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ

ರಿಪ್ಪನ್‌ಪೇಟೆ;-  ಹೊಸನಗರ ತಾಲೂಕಿನ ಅರಸಾಳು -ಕೆಂಚನಾಲ -ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ದಿಢೀರ್ ಕಾಣಿಸಿಕೊಂಡಿರುವ  ಕಾಡು ಆನೆಗಳು ರೈತರು ಬೆಳೆದ ಬಾಳೆ ಮತ್ತು ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು ದ್ವಂಸಗೊಳಿಸಿರುವ ಪ್ರದೇಶಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅರಣ್ಯಇಲಾಖೆಯ ಮತ್ತುಕಂದಾಯ ಇಲಾಖೆ ಆಧಿಕಾರಿಗಳೊಂದಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಹಾನಿಗೊಳಗಾಗಿರುವ ರೈತರಿಗೆ ವೈಯಕ್ತಿಕ ಧನ ಸಹಾಯವನ್ನು ನೀಡಿ ಹಾಗೂ ಅರಣ್ಯಇಲಾಖೆಯಿಂದ ಪರಿಹಾರ ಕೊಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮಸರೂರು ಮಾಣಿಕೆರೆ ಹೊನ್ನಕೊಪ್ಪಕಮದೂರು ಬಳಿ ರೈತರ ಬಾಳೆ ತೋಟಕ್ಕೆ ಆನೆ ದಾಳಿ ನಡೆಸಿ ಬಾಳೆ ದ್ವಂಸಗೊಳಿಸಿದ್ದು ಕಳೆದ ವರ್ಷ ಸಹ ಇದೇಜಾಗದಲ್ಲಿ  ಅನೆ ಬಂದು ಹೋಗುವ ಮೂಲಕ ಬೆಳೆ ಹಾನಿಗೊಳಿಸಿರುತ್ತವೆ ಅದ್ದರಿಂದ ಮುಂದಿನ ದಿನಗಳಲ್ಲಿ ಅನೆ ಬರದಂತೆ ಸೋಲಾರ್ಗಾರ್ಡ್ ಅಳವಡಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಅಳವಡಿಸುವ ಕಾರ್ಯ ಕೈಗೊಳ್ಳುವಂತೆ ಅರಣ್ಯಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಳಸೆ ಗ್ರಾಮದಲ್ಲಿ ಸಹ ಇದೇರೀತಿಯಲ್ಲಿರೈತರಜಮೀನಿಗೆ ನುಗ್ಗಿ ಬೆಳೆ ನಾಶಗೊಳಿಸಿರುತ್ತವೆ ಕೈಗೆ ಬಂದತುತ್ತು ಬಾಯಿಗೆ ಇಲ್ಲದಂತಾಗಿದೆ  ಎಂದು ರೈತರುತಮ್ಮ  ನೋವನ್ನು ಶಾಸಕ ಬೇಳೂರು ಗೋಪಾಲಕೃಷ್ಣ  ಬಳಿ ತೊಡಿಕೊಂಡಾಗ ಶಾಸಕರು ಸ್ಪಂದಿಸಿ ವೈಯಕ್ತಿಕಧನ ಸಹಾಯ ನೀಡುವುದರೊಂದಿಗೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ರೈತರಿಗೆ ಪರಿಹಾರ ನೀಡುವ ಬಗ್ಗೆ ತಾರತಮ್ಯ ಮಾಡದೆ ಸಮರ್ಪಕವಾಗಿ ಪರಿಶೀಲನೆ ನಡಸಿ ಪರಿಹಾರಕೊಡುವ ವ್ಯವಸ್ಥೆ ಮಾಡುವಂತೆ ಖಡಕ್ ಸೂಚನೆ ನೀಡಿದರು.

ಅರಣ್ಯ ಜಾಗ ಒತ್ತುವರಿದಾರರ ರೈತರಿಗೆ ನೋಟಿಸ್

ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಅರಸಾಳು ವಲಯ ವ್ಯಾಪ್ತಿಯಲ್ಲಿ ಬರುವ ಮಸರೂರು ಮಾಣಿಕೆರೆಗ್ರಾಮದಅರಣ್ಯ ಸರ್ವೇ ನಂಬರ್‌ನಲ್ಲಿಆಕ್ರಮ ಸಾಗುವಳಿ ಮಾಡಿಕೊಂಡಿರುವರೈತನೋರ್ವರಿಗೆಅರಣ್ಯಇಲಾಖೆ  ನೋಟಿಸ್ಜಾರಿ ಮಾಡಿದ್ದಾರೆ ಎಂದು ಶಾಸಕರ ಬಳಿ ರೈತ ನೋಟಿಸಿ ಹಿಡಿದುಕೊಂಡು ತೋರಿಸಿದಾಗ ಸ್ಥಳದಲ್ಲಿದ್ದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ತರಾಟೆಗೆ ತಗೆದುಕೊಂಡ ಅವರು ಈ ರೀತಿಯಾಗಿ ನೋಟಿಸ್ ನೀಡಿದರೆ ಮುಂದೆ ನಿಮ್ಮಗಳ ವಿರುದ್ದಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಕೊಡಗು -ಹಾಸನ-ಚಿಕ್ಕಮಂಗಳೂರು ಭಾಗದಲ್ಲಿ ಕಾಡಾನೆಗಳ ಹಾವಳಿ  ಹೆಚ್ಚಾಗಿ  ಇರುತ್ತಿತ್ತು   ಆದರೆ ಇತ್ತೀಚಿನ ವರ್ಷಗಳಲ್ಲಿ ಮಲೆನಾಡಿನ ವ್ಯಾಪ್ತಿಯಲ್ಲಿ ಕಾಣಿಸಿಕೊಳ್ಳುತ್ತಿದೆ ಅವುಗಳು  ಸಂಚರಿಸುವ ಕಾರಿಡಾರ್ ನ್ನು ಬಂದ್ ಮಾಡುವಕಾರ್ಯ ಮಾಡಲಾಗುವುದುಅಲ್ಲದೆ ಕಳೆದ ವರ್ಷ ಕೃಷಿ ಕಾರ್ಮಿಕನೋರ್ವನನ್ನು ಬಲಿ ಪಡೆದಿರುವುದು ಇನ್ನು ಜನಮಾನಸದಲ್ಲಿ ಮಾಸುವ ಮುನ್ನವೇ ಪುನ: ಅನೆಗಳು ಬಂದಿರುತ್ತವೆ, ಅದರೆ  ಬಿಜೆಪಿಯವರು ಉದ್ದೇಶ ಪೂರ್ವಕವಾಗಿ ಇಲ್ಲಸಲ್ಲದ ಅರೋಪವನ್ನು ಮಾಡುತ್ತಿದ್ದಾರೆ.ಅವರ ಅವಧಿಯಲ್ಲಿ ಈ ರೀತಿ ದಾಳಿ ಮಾಡಿದಾಗ ಏನು ಕಡಿದು ಗುಡ್ಡೆ ಹಾಕಿದ್ದಾರೆ ಎಂದು  ಹೇಳಲಿ ಎಂದು ಸವಾಲು ಹಾಕಿದ ಅವರು ಅವರ ಅವಧಿಯಲ್ಲಿ ಯಾವ ಅರಣ್ಯಾಧಿಕಾರಿಗಳನ್ನು ಅಮಾನತ್ತು ಪಡಿಸಿ ಕ್ರಮ ಜರುಗಿಸಿದ್ದಾರೆಂದು ಹೇಳಿ ಎಂದರು.

ಈ ಸಂದರ್ಭದಲ್ಲಿ ಶಿವಮೊಗ್ಗ ವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸಹಾಯಕಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಹೊಸನಗರ ತಹಶೀಲ್ದಾರ್ ಭರತ್‌ರಾಜ್ ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಹೊಸನಗರತಾಲ್ಲೂಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ಚಂದ್ರಮೌಳಿಗೌಡ,ಉಬೇದುಲ್ಲಾ ಷರೀಫ್ , ರವೀಂದ್ರ ಕೆರೆಹಳ್ಳಿ, ಡಿ.ಈ.ಮಧುಸೂದನ್, ಗಣಪತಿ,ಎನ್.ಚಂದ್ರೇಶ್, ನಿರೂಪ್‌ಕುಮಾರ್,ಆಶೀಫ್‌ಭಾಷಾ, ಖಲಿಲ್ ಷರೀಫ್, ಗೋಪಾಲ ಕೃಷ್ಣ ಜಿ. ಆರ್ ಹಾಗೂ ಇನ್ನಿತರರು  ಹಾಜರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

15 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

15 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

15 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

18 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

22 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

22 hours ago