RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

ರಿಪ್ಪನ್ ಪೇಟೆ : ಇಲ್ಲಿನ ಹಿರೇಮೈಥಿ ಗ್ರಾಮದಲ್ಲಿ జಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಸಂಭವಿಸಿ ಪರಸ್ಪರ ದೊಣ್ಣೆ, ಗುದ್ದಲಿ ಹಾಗೂ ಬೇಲಿ ಗೂಟಗಳಿಂದ ಹೊಡೆದಾಟ ನಡೆದ ಪರಿಣಾಮ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಾಗರ ಹಾಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳೆ-ಪುರುಷರು ಸೇರಿದಂತೆ ಎರಡೂ ಕುಟುಂಬಗಳ ಹಲವು ಸದಸ್ಯರು ಈ ಮಾರಾಮಾರಿಯಲ್ಲಿ ಭಾಗಿಯಾಗಿದ್ದಾರೆ

ಹಿರೆಮೈಥೆ ಗ್ರಾಮದ ಶಿವಪ್ಪ ಜಿ.ಟಿ  ನೀಡಿರುವ ದೂರಿನ ಪ್ರಕಾರ, ತಮ್ಮ ತೋಟಕ್ಕೆ ಹೋಗುವ ದಾರಿಯ ಕುರಿತಾಗಿ ಪಕ್ಕದ ಜಮೀನಿನ ಗಂಗಾಧರರ ಕುಟುಂಬದೊಂದಿಗೆ ಹಲವು ವರ್ಷಗಳಿಂದ ವಿವಾದ ಮುಂದುವರಿದು ಬಂದಿದೆ. ಇದೇ ವಿವಾದ ಹಿನ್ನಲೆಯಲ್ಲಿ ಗಂಗಾಧರ, ಅವರ ಪುತ್ರರು ಈಶ್ವರ–ಲೋಕೇಶ್ ಮತ್ತು ತಮ್ಮ ತಿಮ್ಮಪ್ಪ ತಡೆದು ನಿಲ್ಲಿಸಿ ಜಗಳ ಪ್ರಾರಂಭಿಸಿದರೆಂದು ದೂರಿನಲ್ಲಿ ತಿಳಿಸಲಾಗಿದೆ. ಈಶ್ವರ ಕೈಯಲ್ಲಿದ್ದ ಗುದ್ದಲಿಯಿಂದ ದಾಳಿ ಮಾಡಲು ಪ್ರಯತ್ನಿಸಿದಾಗ ಹೊಡೆತ ಪಿರಿಯಾದಿದಾರರ ಬಲ ಹಣೆಗೆ ಬಿದ್ದು ರಕ್ತಗಾಯವಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೊಣ್ಣೆಯಿಂದ ಹೊಡೆದ ಪರಿಣಾಮ ಪಿರಿಯಾದಿದಾರ ಮತ್ತು ಅವರ ಮಗನಿಗೂ ಗಾಯಗಳಾಗಿವೆ. ಜಗಳ ಬಿಡಿಸಲು ಬಂದ ಉಪೇಂದ್ರನ ಮೇಲೂ ದಾಳಿ ನಡೆದಿದ್ದು, ಸ್ಥಳೀಯರು ಮಧ್ಯ ಪ್ರವೇಶಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ.

ಹಿರೆಮೈಥೆ ಗ್ರಾಮದ ಗಂಗಾಧರ್ ನೀಡಿರುವ ದೂರಿನಲ್ಲಿ, ಬಗರ್ ಹುಕುಂ ಜಮೀನಿನ ಹಕ್ಕು ಕುರಿತು ತೀರ್ಪು ಪಿರಿಯಾದಿದಾರರ ಪರ ಬಂದಿರುವುದಕ್ಕೆ ಶಿವಪ್ಪ ಮತ್ತು ಲಿಂಗಪ್ಪ ಅಸಮಾಧಾನಗೊಂಡಿದ್ದರು. ಈ ಹಿನ್ನೆಲೆ 27ರಂದು ತೋಟ ಹಾದಿ ವಿಚಾರವಾಗಿ ಮಾತಿಗೆ ಮಾತು ಬೆಳೆದು ಜಗಳ ಉಂಟಾಯಿತು ಎಂದು ದೂರಿನಲ್ಲಿ ಹೇಳಲಾಗಿದೆ. ಶಿವಪ್ಪನ ಅಳಿಯ ಸಂದೇಶ್ ಬೇಲಿ ಗೂಟದಿಂದ ದಾಳಿ ಮಾಡಿದ ಪರಿಣಾಮ ಈಶ್ವರ ತಲೆಗೆ ಪೆಟ್ಟು ಬಿದ್ದಿದ್ದು, ಇನ್ನೂ ಕೆಲವರಿಗೆ ಕೈ–ಕಾಲುಗಳಿಗೆ ಗಾಯಗಳಾಗಿವೆ ಎಂದು ಅವರು ಮಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನೆಯ ನಂತರ ಎರಡು ಕುಟುಂಬಗಳು ಪರಸ್ಪರ ಜೀವ ಬೆದರಿಕೆ ಮತ್ತು ಹಲ್ಲೆ ಆರೋಪಗಳನ್ನು ಮಾಡಿದ್ದಾರೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಎರಡೂ FIR ಗಳನ್ನು ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

14 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

14 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

14 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

17 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

20 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

21 hours ago