ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ
ರಿಪ್ಪನ್ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರ ವಿಶೇಷ ಅನುದಾನದಡಿಯಲ್ಲಿ 32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು.
ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ ತಾಲ್ಲೂಕಿನ ಎರಡು ಹೋಬಳಿ ವ್ಯಾಪ್ತಿಯಲ್ಲಿ ನನಗೆ ಹೆಚ್ಚು ಮತದಾನ ಮಾಡುವುದರೊಂದಿಗೆ ಆಶೀರ್ವಾದ ಮಾಡಿದ್ದಾರೆ. ಅವರ ಬಹುವರ್ಷದ ಬೇಡಿಕೆಯನ್ನು ಈಡೇರಿಸುವ ಸಂಕಲ್ಪ ನನ್ನದಾಗಿದೆ ಎಂದ ಅವರು ಆಭಿವೃದ್ದಿ ಕಾರ್ಯದಲ್ಲಿ ಎಲ್ಲರೂ ಕೈಜೊಡಿಸಿ ಕೆರೆಹಳ್ಳಿ ಹೋಬಳಿಯ ವ್ಯಾಪ್ತಿಯ ರಿಪ್ಪನ್ಪೇಟೆ ಗ್ರಾಮ ಪಂಚಾಯಿತ್ ವಿವಿಧ ಬಡಾವಣೆಗಳಲ್ಲಿರುವ ಎಲ್ಲಾ ಸಂಪರ್ಕ ರಸ್ತೆಗಳು ಸಂಪೂರ್ಣವಾಗಿ ಆಭಿವೃದ್ದಿ ಪಡಿಸಿದಂತಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ ಬಂಡಿ ರಾಮಚಂದ್ರ,ಗ್ರಾಮ ಪಂಚಾಯಿತ್ ಆಧ್ಯಕ್ಷೆ ಧನಲಕ್ಷಿ, ಹೊಸನಗರ ತಾಲ್ಲೂಕ್ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಚಂದ್ರುಮೌಳಿಗೌಡರು, ಹೋಬಳಿ ಘಟಕದ ಅಧ್ಯಕ್ಷ ಗಣಪತಿ ಗವಟೂರು, ರವೀಂದ್ರಕೆರೆಹಳ್ಳಿ, ಗ್ರಾಮ ಪಂಚಾಯಿತ್ ಸದಸ್ಯರಾದ ಎನ್.ಚಂದ್ರೇಶ್, ಡಿ.ಈ ಮಧುಸೂದನ್,ದಾನಮ್ಮ, ನಿರೂಫ್ಕುಮಾರ್,ಆಶೀಫ್ ಭಾಷಾ, ಅನುಪಮ ರಾಕೇಶ್,ಮಹಾಲಕ್ಷಿö್ಮ, ಉಮಾಕರ್ ಅರಸಾಳು,ಸಣ್ಣಕ್ಕಿ ಮಂಜು,ಚೌಡೇಶ್ವರಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಸುರೇಶ್ ಆರ್.ಇ.ಇನ್ನಿತರರು ಪಾಲ್ಗೊಂಡಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್