ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ
ರಿಪ್ಪನ್ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರ ವಿಶೇಷ ಅನುದಾನದಡಿಯಲ್ಲಿ 32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು.
ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ ತಾಲ್ಲೂಕಿನ ಎರಡು ಹೋಬಳಿ ವ್ಯಾಪ್ತಿಯಲ್ಲಿ ನನಗೆ ಹೆಚ್ಚು ಮತದಾನ ಮಾಡುವುದರೊಂದಿಗೆ ಆಶೀರ್ವಾದ ಮಾಡಿದ್ದಾರೆ. ಅವರ ಬಹುವರ್ಷದ ಬೇಡಿಕೆಯನ್ನು ಈಡೇರಿಸುವ ಸಂಕಲ್ಪ ನನ್ನದಾಗಿದೆ ಎಂದ ಅವರು ಆಭಿವೃದ್ದಿ ಕಾರ್ಯದಲ್ಲಿ ಎಲ್ಲರೂ ಕೈಜೊಡಿಸಿ ಕೆರೆಹಳ್ಳಿ ಹೋಬಳಿಯ ವ್ಯಾಪ್ತಿಯ ರಿಪ್ಪನ್ಪೇಟೆ ಗ್ರಾಮ ಪಂಚಾಯಿತ್ ವಿವಿಧ ಬಡಾವಣೆಗಳಲ್ಲಿರುವ ಎಲ್ಲಾ ಸಂಪರ್ಕ ರಸ್ತೆಗಳು ಸಂಪೂರ್ಣವಾಗಿ ಆಭಿವೃದ್ದಿ ಪಡಿಸಿದಂತಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ ಬಂಡಿ ರಾಮಚಂದ್ರ,ಗ್ರಾಮ ಪಂಚಾಯಿತ್ ಆಧ್ಯಕ್ಷೆ ಧನಲಕ್ಷಿ, ಹೊಸನಗರ ತಾಲ್ಲೂಕ್ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಚಂದ್ರುಮೌಳಿಗೌಡರು, ಹೋಬಳಿ ಘಟಕದ ಅಧ್ಯಕ್ಷ ಗಣಪತಿ ಗವಟೂರು, ರವೀಂದ್ರಕೆರೆಹಳ್ಳಿ, ಗ್ರಾಮ ಪಂಚಾಯಿತ್ ಸದಸ್ಯರಾದ ಎನ್.ಚಂದ್ರೇಶ್, ಡಿ.ಈ ಮಧುಸೂದನ್,ದಾನಮ್ಮ, ನಿರೂಫ್ಕುಮಾರ್,ಆಶೀಫ್ ಭಾಷಾ, ಅನುಪಮ ರಾಕೇಶ್,ಮಹಾಲಕ್ಷಿö್ಮ, ಉಮಾಕರ್ ಅರಸಾಳು,ಸಣ್ಣಕ್ಕಿ ಮಂಜು,ಚೌಡೇಶ್ವರಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಸುರೇಶ್ ಆರ್.ಇ.ಇನ್ನಿತರರು ಪಾಲ್ಗೊಂಡಿದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…