ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ
ಭದ್ರಾವತಿ: ನಾಯಿ — ನಿಷ್ಠೆ, ಪ್ರೀತಿ ಮತ್ತು ಬದ್ಧತೆಯ ಪ್ರತೀಕ. ಮಾಲೀಕನಿಗಾಗಿ ಜೀವವನ್ನೇ ಪಣಕ್ಕಿಡುವ ಈ ಪ್ರಾಣಿ, ಕೆಲವೊಮ್ಮೆ ಅವನಿಂದ ದೂರವಾಗುವುದನ್ನೇ ಸಹಿಸಲಾರದು. ಭದ್ರಾವತಿಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಅದಕ್ಕೆ ಜೀವಂತ ಉದಾಹರಣೆ.
ನಗರದ ಹುತ್ತಾಕಾಲನಿಯ ಜಿಂಕ್ಲೈನ್ ಪ್ರದೇಶದ ನಿವಾಸಿ ಲಾರೆನ್ಸ್ (61) ಪೈಂಟರ್ ಕೆಲಸ ಮಾಡುತ್ತಿದ್ದು, ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರು ನಿಧನರಾದರು. ಆಸ್ಪತ್ರೆಯಿಂದ ಅವರ ಮೃತದೇಹವನ್ನು ಮನೆಗೆ ತರಲಾಗುತ್ತಿದ್ದಂತೆಯೇ, ಮನೆಯ ಶ್ವಾನವು ಆ ದೃಶ್ಯವನ್ನು ಕಂಡು ತೀವ್ರ ನೊಂದುಕೊಂಡಿತು.
ಮಾಲೀಕನ ಮೃತದೇಹದ ಪಕ್ಕದಲ್ಲೇ ಅದು ಮಲಗಿ, ಶಾಂತವಾಗಿ ತನ್ನ ಅಂತಿಮ ಉಸಿರೆಳೆದಿತು. ಕುಟುಂಬಸ್ಥರು ಲಾರೆನ್ಸ್ ಅವರ ಅಂತ್ಯಕ್ರಿಯೆ ಬಳಿಕ, ಆ ಶ್ವಾನವನ್ನೂ ಮನೆಯ ಹಿಂಭಾಗದಲ್ಲೇ ಗೌರವಪೂರ್ವಕವಾಗಿ ಅಂತ್ಯಸಂಸ್ಕಾರ ನಡೆಸಲಾಯಿತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್