ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ
ಭದ್ರಾವತಿ: ನಾಯಿ — ನಿಷ್ಠೆ, ಪ್ರೀತಿ ಮತ್ತು ಬದ್ಧತೆಯ ಪ್ರತೀಕ. ಮಾಲೀಕನಿಗಾಗಿ ಜೀವವನ್ನೇ ಪಣಕ್ಕಿಡುವ ಈ ಪ್ರಾಣಿ, ಕೆಲವೊಮ್ಮೆ ಅವನಿಂದ ದೂರವಾಗುವುದನ್ನೇ ಸಹಿಸಲಾರದು. ಭದ್ರಾವತಿಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಅದಕ್ಕೆ ಜೀವಂತ ಉದಾಹರಣೆ.
ನಗರದ ಹುತ್ತಾಕಾಲನಿಯ ಜಿಂಕ್ಲೈನ್ ಪ್ರದೇಶದ ನಿವಾಸಿ ಲಾರೆನ್ಸ್ (61) ಪೈಂಟರ್ ಕೆಲಸ ಮಾಡುತ್ತಿದ್ದು, ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರು ನಿಧನರಾದರು. ಆಸ್ಪತ್ರೆಯಿಂದ ಅವರ ಮೃತದೇಹವನ್ನು ಮನೆಗೆ ತರಲಾಗುತ್ತಿದ್ದಂತೆಯೇ, ಮನೆಯ ಶ್ವಾನವು ಆ ದೃಶ್ಯವನ್ನು ಕಂಡು ತೀವ್ರ ನೊಂದುಕೊಂಡಿತು.
ಮಾಲೀಕನ ಮೃತದೇಹದ ಪಕ್ಕದಲ್ಲೇ ಅದು ಮಲಗಿ, ಶಾಂತವಾಗಿ ತನ್ನ ಅಂತಿಮ ಉಸಿರೆಳೆದಿತು. ಕುಟುಂಬಸ್ಥರು ಲಾರೆನ್ಸ್ ಅವರ ಅಂತ್ಯಕ್ರಿಯೆ ಬಳಿಕ, ಆ ಶ್ವಾನವನ್ನೂ ಮನೆಯ ಹಿಂಭಾಗದಲ್ಲೇ ಗೌರವಪೂರ್ವಕವಾಗಿ ಅಂತ್ಯಸಂಸ್ಕಾರ ನಡೆಸಲಾಯಿತು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…